ಹಿಂದಿ ಚಿತ್ರರಂಗದಲ್ಲಿ ಹೊಸಗಾಳಿ ಬೀಸುತ್ತಿದೆಯೆಂದೂ ಆ ರೀತಿಯ ಗಾಳಿ ಕನ್ನಡ ಚಿತ್ರಪಟದಲ್ಲಿ ಯಾಕಿಲ್ಲವೆಂದೂ ಕೆಲವರು ಕೇಳುತ್ತಿದ್ದಾರೆ. ಇಂತಹ ಕೇಳುಗರು ಮತ್ತು ನೋಡುಗರು ಒಂದೇ ಎಂದು ಹೇಳುವ ‘ಧೈರ್ಯ’ ನನಗಿಲ್ಲ. ಯಾಕೆಂದರೆ ಹಿಂದಿ ಚಿತ್ರಗಳನ್ನು ನ...

ಗೆಳತಿ, ನೀನಾದರೆ ಸನಿಹ ಮೂಡುವುದು ಕವಿತೆ ಇಲ್ಲವಾದರೆ ಕತೆ ಆರಿಸಿಕೊ ನಿನಗ್ಯಾವುದು ಇಷ್ಟ ಬೇಡ ನನ್ನ ಚಿಂತೆ ನನಗಿರುವಾಗ ನಿನ್ನ ಚಿಂತೆ /ಪ// ನನ್ನ ಪ್ರೀತಿ ಅಚಲ ಇರಬಹುದು ಅದು ಹಿಮಾಚಲ ಇದಕೆ ಬೇಕಿಲ್ಲ ಸಮರ್ಥನೆ ಮಾಡಿದರೂ ನೀ ನಿರಾಕರಣೆ ನೀನು ಬದು...

ಹಸಿರು ಎಲೆಗಳ ಎಳೆಯಲಿ ಹಸಿರು ಉಸಿರಿನ ನರ್ತನ ಪ್ರಕೃತಿ ಇತ್ತಿಹ ದಿವ್ಯಕೊಡುಗೆಯ ಜೀವ ಜೀವದಾ ಚೇತನ || ಸುಪ್ರಭಾತದ ತನಿಯ ಚೆಲುವಲಿ ಹೂವು ಹೂವಿನ ಮೊಗದಲಿ ತುಂತುರು ನೀರ ಮಣಿಯರೂಪವು ಹೊಳೆಯುವ ಸಂಭ್ರಮ || ನಗುವ ಚೆಲ್ಲಿ ಬರುವ ದುಂಬಿಯ ಸಾಲು ಚೆಲುವಿ...

ಒಳಬನ್ನಿ ಗೆಳೆಯರೆ ಇದು ಒಬ್ಬ ಕವೀಂದ್ರನ ಗೋರಿ ಹುಸಿದಿದ್ದರೆ ಕಸಿದಿದ್ದರೆ ಮಾತಿಗೆ ತಪ್ಪಿ ತಪಿಸಿದ್ದರೆ ಕಣ್ಣದೀಪ ಕಂಡವರ ಕಷ್ಟಕ್ಕೆ ಉರಿದು ಎಂದಾದರೂ ಎರಡು ಹನಿ ಬೆಳಕ ಬಸಿದಿದ್ದರೆ ರಾತ್ರಿ ರಾಮಾಯಣ ಹಗಲು ಭಾರತ ಬಾಳೆಲ್ಲ ರಗಳೆ ಹೂಡಿದ ಒಂದು ಬೃಹತ...

ನಂಬು ನಂಬೆಲೆ ಮನವೆ ನಿನ್ನನು ನಂಬದಿದ್ದರೆ ನಶ್ವರಾ ತುಂಬು ಎದೆಯಲಿ ವಿಶ್ವಮೂರ್ತಿಯ ಇಲ್ಲದೆಲ್ಲವು ಅಪಸ್ವರಾ || ಪ|| ನಂಬಿ ನಿನ್ನನು ಸುಖವ ಕಂಡರು ತುಂಬು ಹೃದಯದಿ ಶರಣರು ನಂಬಿ ನಿನ್ನಯ ಹೊಗಳಿ ದಣಿಯದೆ ಹಾಡಿ ಕುಣಿದರು ದಾಸರು || ೧ || ಹುಟ್ಟಿ ಸಾ...

ಸದಾ ಬ್ರಹ್ಮವಿಚಾರಿ ಏಕ ಜನಿವಾರಧಾರಿ ಕೆಲವೊಮ್ಮೆ ಮಾತ್ರ ಶನಿವಾರ ಟೆರಿಲೀನು ವಸ್ತ್ರ ರವಿವಾರ ವಿವಸ್ತ್ರ ಸಾತ್ವಿಕ ಆಹಾರಿ ಶುದ್ಧ ಶಾಖಾಹಾರಿ ಮಾಂಸಕ್ಕೆ ಮಾಂಸ ಕೂಡಿಸಿ ಮಾಡುವ ಉತ್ಪತ್ತಿ ಬೇಡಯ್ಯ ಬೇಯಿಸಿದ ತತ್ತಿಯಾದರೆ ಒಂದೆರಡು ಪರವಾಯಿಲ್ಲ ಒತ್ತಾ...

ಕತೆಗಾರರು ಯಶಸ್ವಿ ಪತ್ರಿಕಾ ಲೇಖಕರಾಗರೆಂದು ಯಾರೋ ನುಡಿದ ನೆನಪಿದೆ. ಅದರಲ್ಲಿ ಸತ್ಯವಿದ್ದಿರಬೇಕು. ನಾನು ಕತೆಗಾರನಂತೆ. ಹಾಗೆಂದು ಜನರು ಹೇಳುವರು. ಜನರು ಒಗ್ಗಟ್ಟಾಗಿ ಇಟ್ಟ ಹೆಸರು, ತೊಟ್ಟಿಲಿನಲ್ಲಿ ತಂದೆ-ತಾಯ್ಗಳು ಇರಿಸಿದ ಹೆಸರಿಗಿಂತ ಬಲವುಳ್ಳ...

ಇಪ್ಪತ್ತು ಮಹಡಿ ಕಟ್ಟಡ ಕೆಳಗಿನಿಂದ ಗುಂಡ ಮೇಲೆ ನೋಡುತ್ತಾ ನಿಂತಿದ್ದ. ಹಾದಿ ಹೋಕರ್‍ಯಾರೋ ಕೇಳಿದ್ರು – “ಏನು ನೋಡುತ್ತಿರುವೆ?” “ಮೇಲಿಂದ ನನ್ನ ವಾಚು ಕೆಳಗೆ ಬಿತ್ತು..” “ಅದು ಇಲ್ಲೆಲ್ಲೋ ಬಿದ್ದಿರುತ...

ಸತ್ತಂಗ ನೀ ಮಾಡ ಅತ್ತಂಗ ನಾ ಮಾಡ ಪೂಜಾರಿ ನಾನಽ ಪರಮೇಶಿ ||ಪಲ್ಲ|| ಕಲ್ಲಾಗಿ ನೀ ಕೂಡ ಬೆಲ್ಲಾ ನಾ ಕೊಡತೇನ ಬಕುತರು ಬರಲೇ ನಿನಗುಡಿಗೆ ಗಂಟಿ ಗುಗ್ಗುಳ ನಿನಗ ಹುಗ್ಗಿ ಹೋಳಿಗಿ ನನಗ ಬಂಗಾರ ಕಳಸಾ ನಿನಮುಡಿಗೆ ||೧|| ನೀ ಕಲ್ಲು ಆದರ ಕಲ್ಲೆಲ್ಲ ಕೈವಲ್...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...