(ವಿಸ್ತೃತ ಕವನ) ಮಾತನಾಡಬೇಕು ನಾವು ಒಂದು ಘಳಿಗೆ ಕುಳಿತು ಬಿಟ್ಟು ಎಲ್ಲ ಹಮ್ಮು ಬಿಮ್ಮು ಹೃದಯ ಬೆಸೆಯಬೇಕು || ಆಕಾಶವು ಅತ್ತಿದೆ ಧರೆ ಧಗಧಗ ಉರಿದಿದೆ ಪಂಚಭೂತ ನಮ್ಮ ನೋಡಿ ನೇಣುಗಂಬ ಹುಡುಕಿದೆ ಉಳಿಯಲಿಲ್ಲಿ ಎಲ್ಲ ಎಲ್ಲ ಬದುಕಲಿ ನಮ್ಮ ಸಾವು ನೋಡಿ ...

ವೃಷಭಾವತಿ ಒಮ್ಮೆ ಹರಿದು ಉಕ್ಕೇರಿ ನೆಲ ಜಲ ಹೊಲ ಭೇದ ಭಾವವಿಲ್ಲದೇ ಉಣಿಸಿದ್ದಳು ಎಲ್ಲರನೂ ತಣಿಸಿದ್ದಳು ಈಗೇಕೆ ವಿಷವಾದೆ ನಾನು ಎಂದು ಪರಿತಪಿಸುತ್ತಾಳೆ. ತನಗೆ ವಿಷ ವೂಡಿದವರ ಕಾಣಲಾಗದೇ ಹಿಡಿಯಲಾಗದೇ ತಡೆಯಲಾಗದೇ ಹೀಗೆ ತುಂಬಿ ಹರಿಯುತ್ತಿದ್ದ ನದಿಗ...

ಬೆಳ್ಳೂರು ಮೈಲಾರ ಶ್ರೀಕಂಠನಡಿದೆಗೆದು ಸಾಲ್ಗುಮೀ ತಿರೆಯಲ್ಲಿ ಪಾಡಿದುದು ನೋಡಿದುದು ಇಂದ್ರಸಭೆಯೋಳು ನಮ್ಮ ತಾಯ ಕೀರ್ತಿಯ ಹಾಡಿ ಕನ್ನಡ ಧ್ವಜಕೀರ್ತಿಯಲ್ಲಿ ನರ್ತನ ಮಾಡಿ ಸಾಹಿತ್ಯ ಸೊಬಗುಗಳನೆಲ್ಲರ್ಗೆ ತೋರುವೊಡೆ ಎಲ್ಲರೊಳು ತಾ ಹೊಕ್ಕ ಹೃದಯದಲಿ ನಲಿ...

ಸುಪ್ರಸಿದ್ಧ ಕವಿಗಳೂ ಸಾಹಿತಿಗಳೂ ಆಗಿದ್ದ ಶ್ರೀ – ರಾಯರ ಸಂದರ್ಶನ ತೆಗೆದುಕೊಳ್ಳುವದಕ್ಕೆಂದು ಮೊದಲೇ ನಿಗದಿಯಾದಂತೆ ನನ್ನ ಮಿತ್ರ ಆನಂದನ ಜತೆ ಗೂಡಿ ಅವರ ಮನೆಯನ್ನು ಹತ್ತು ನಿಮಿಷ ಮೊದಲೇ ತಲುಪಿದ್ದಾಗಿತ್ತು. ಹೆಸರಾಂತ ಮಂದಿಯ ಸಂದರ್ಶನ ಮಾಡ...

ಕಸಿಯುತ್ತಾರೆ ಅನ್ನ ಕಾಣುತ್ತಾರೆ ಜೀತದಾಳಿನಂತೆ ಚಿಗುರುವ ಮುನ್ನ ಹಿಸುಕುತ್ತಾರೆ ಮೊಳಕೆಯಲಿ ತೊಗಲು ಸುಲಿವಂಗೆ ಎಲ್ಲುಂಟು ಮಾನವೀಯತೆ ರೆಕ್ಕೆ ಕತ್ತರಿಸಲು ಹಾತೊರೆಯುವ ಅಮಲಿನ ಜನ ನಡೆಸುತ್ತಾರೆ ಕಬಳಿಕೆ ದಬ್ಬಾಳಿಕೆ ಪೂಜಾರಿ ಮುಂದೆ ದೇವನಾಟವೇ? ವಿಜ...

ಪುರುಷರೇ, ನಿಮ್ಮಂತೆ ನಮ್ಮೊಳಗೂ ಇರುವುದೊಂದು ಅಂತರಂಗ! ಲಾಕರಿನಲ್ಲಿಟ್ಟ ಒಡವೆಯಂತೆ ಜೋಪಾನವಾಗಿಟ್ಟಿರುವೆವು- ಅಲ್ಲಿಗೆ ಪರಪುರುಷರ ಪ್ರವೇಶವಾಗದಿರಲೆಂದು ಪುರುಷತ್ವದ ಬಲಾತ್ಕಾರದ ಒತ್ತು ಬೀಳದಿರಲೆಂದು ಬಹಳ ಜೋಪಾನವಾಗಿಟ್ಟಿರುವೆವು! ಕೀಲಿ ಕೈ ಎರಡು...

ಅಯ್ಯೋ ನಾನೇ! ಕಂಡ ಸತ್ಯವನೆ ಗ್ರಹಿಸದ ಎಂಥ ಕಣ್ಣನು ಒಲವು ನನ್ನ ಮುಖಕಿರಿಸಿತು ಗ್ರಹಿಸದಿದ್ದರೆ ಇರಲಿ ಕಂಡದ್ದ ತಪ್ಪಾಗಿ ವ್ಯಾಖ್ಯಾನಿಸುವ ನನ್ನ ಅರಿವೇನಾಯಿತು? ಕಣ್ಣು ಕಂಡದ್ದು ಚೆಲುವಾಗಿದ್ದ ಪಕ್ಷಕ್ಕೆ ಹಾಗಿಲ್ಲ ಎನುವ ಲೋಕದ ಮಾತಿಗೇನರ್‍ಥ? ಅರ್...

ತಿಮ್ಮರಾಯಪ್ಪನ ಮೆಚ್ಚಿಕೆ ರಂಗಣ್ಣ ಬೆಂಗಳೂರನ್ನು ತಲುಪಿದ್ದಾಯಿತು; ಮನೆಯನ್ನು ಸೇರಿದ್ದಾಯಿತು. ರೈಲ್ ಸ್ಟೇಷನ್ನಿಗೆ ಗೋಪಾಲನೂ ಶಂಕರಪ್ಪ ನೂ ಬಂದಿದ್ದುದರಿಂದ ಹೆಚ್ಚು ತೊಂದರೆಯನ್ನು ಪಡದೆ, ಹೆಚ್ಚು ಗಾಡಿಗಳನ್ನು ಮಾತ್ರ ಮಾಡಿಕೊಂಡು ಮನೆಯನ್ನು ಸೇರ...

ಹೆಣ್ಣು ಹುಟ್ಟಿತೆಂದು ಮುಖ ಇಳಿಸಿದರು ಸಂತೋಷದ ತಮಟೆ ಬಾರಿಸಲಿಲ್ಲ ಸಮಾಧಾನಕ್ಕೆ ಮನೆಯಲಕ್ಷ್ಮಿ ಎಂದರೆ ಹೊರತಾಗಿ ಖರ್‍ಚು ಜಾಸ್ತಿ ಎಂದು ನೊಂದರು ರ್‍ಯಾಂಕ್ ಪಡೆದಳೆಂದು ಬೀಗಿ ತಮಟೆ ಬಾರಿಸಲಿಲ್ಲ ಹೆಚ್ಚು ಓದಿದವನನ್ನು ಹುಡುಕಬೇಕಲ್ಲ ಬೆವರಿಳಿಸತೊಡಗ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...