ಕಣ್ಣೀರಿನ ಕಡಲಿನ ಮೇಲೆ!

ಕಣ್ಣೀರಿನ ಕಡಲಿನ ಮೇಲೆ
ಮಿಂಚಿದೆ ನನ್ನೀ ಬಾಳಿನ ಒಲವಿನಲೆ!

ದೂರ ತೋರಿದಾ ನೀಲ ಬೆಟ್ಟಗಳ ನೀಲ ಮುಗಿಲಿನಲ್ಲಿ
ಮುಳುಗು ಸೂರ್ಯನಾ ಕೆಂಪು ಕಾಡಿಗೆಯ ಬಣ್ಣ ಮಡಿಲಿನಲ್ಲಿ
ತಾರೆ ಓರೆಯಲಿ ನಿಂತು ನೋಡುತಿರೆ, ಅಲೆಯು ಮೇಲೆ ಹೊಮ್ಮಿ
ಚಿಣ್ಣ ಚಿಣ್ಣನೇ ದುಗುಡ ಹನಿಗಳಲಿ ಹಾರುತಿಹುದು ಚಿಮ್ಮಿ!

ನಾವು ಪಡೆದುದಿದು; ಜೀವ ನೀಡಿದುದು; ಸಾವು ತಂದುದಿದನೆ?
ಕೇಳಿ ಕಾಡಿ ಯುಗ ಬಾಳ ವಿರಹದಲಿ ತಂದ ಹಸದ ಹದನೆ?
ಗಾಳಿ ಸೆರಗಿನಲಿ ಹೋಳುನಡೆಯುತಲಿ ಮುಗಿಲು ಸಿಡಿಯುವಂತೆ
ನನ್ನ ಬಾಳಿನಲಿ ಚೆನ್ನೆ ಸಾಗಿದಳು ತಾರೆ ಮರಳುವಂತೆ!

ಹಗಲು ಬರುವುದೋ? ಇರುಳು ಕಳೆವುದೋ? ಆಸೆ ಉಕ್ಕಲಹುದೇ?
ಬಾಳ ತುಂಬಿರುವ ಗೋಳ ಮರೆಯುತಲಿ ನಾಳೆ ಒಕ್ಕಲಹುದೆ?
ಚಿಂತೆ ಚಿತೆಗೆ ಬಲಿ ನಿಂತು ಉರಿಯುತಿಹ ತವಕಗೊಂಡ ಮನವ
ಶಾಂತಗೊಳಿಸಲೆಂದೆಂತು ನಡೆಸಿದರು ಕಾಣಲಿಲ್ಲ ಉಷೆಯ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರಿ ನಾಗರಗಳು
Next post ಬೀದಿ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…