ಕಣ್ಣೀರಿನ ಕಡಲಿನ ಮೇಲೆ!

ಕಣ್ಣೀರಿನ ಕಡಲಿನ ಮೇಲೆ
ಮಿಂಚಿದೆ ನನ್ನೀ ಬಾಳಿನ ಒಲವಿನಲೆ!

ದೂರ ತೋರಿದಾ ನೀಲ ಬೆಟ್ಟಗಳ ನೀಲ ಮುಗಿಲಿನಲ್ಲಿ
ಮುಳುಗು ಸೂರ್ಯನಾ ಕೆಂಪು ಕಾಡಿಗೆಯ ಬಣ್ಣ ಮಡಿಲಿನಲ್ಲಿ
ತಾರೆ ಓರೆಯಲಿ ನಿಂತು ನೋಡುತಿರೆ, ಅಲೆಯು ಮೇಲೆ ಹೊಮ್ಮಿ
ಚಿಣ್ಣ ಚಿಣ್ಣನೇ ದುಗುಡ ಹನಿಗಳಲಿ ಹಾರುತಿಹುದು ಚಿಮ್ಮಿ!

ನಾವು ಪಡೆದುದಿದು; ಜೀವ ನೀಡಿದುದು; ಸಾವು ತಂದುದಿದನೆ?
ಕೇಳಿ ಕಾಡಿ ಯುಗ ಬಾಳ ವಿರಹದಲಿ ತಂದ ಹಸದ ಹದನೆ?
ಗಾಳಿ ಸೆರಗಿನಲಿ ಹೋಳುನಡೆಯುತಲಿ ಮುಗಿಲು ಸಿಡಿಯುವಂತೆ
ನನ್ನ ಬಾಳಿನಲಿ ಚೆನ್ನೆ ಸಾಗಿದಳು ತಾರೆ ಮರಳುವಂತೆ!

ಹಗಲು ಬರುವುದೋ? ಇರುಳು ಕಳೆವುದೋ? ಆಸೆ ಉಕ್ಕಲಹುದೇ?
ಬಾಳ ತುಂಬಿರುವ ಗೋಳ ಮರೆಯುತಲಿ ನಾಳೆ ಒಕ್ಕಲಹುದೆ?
ಚಿಂತೆ ಚಿತೆಗೆ ಬಲಿ ನಿಂತು ಉರಿಯುತಿಹ ತವಕಗೊಂಡ ಮನವ
ಶಾಂತಗೊಳಿಸಲೆಂದೆಂತು ನಡೆಸಿದರು ಕಾಣಲಿಲ್ಲ ಉಷೆಯ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರಿ ನಾಗರಗಳು
Next post ಬೀದಿ

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

cheap jordans|wholesale air max|wholesale jordans|wholesale jewelry|wholesale jerseys