ಕಣ್ಣೀರಿನ ಕಡಲಿನ ಮೇಲೆ!

ಕಣ್ಣೀರಿನ ಕಡಲಿನ ಮೇಲೆ
ಮಿಂಚಿದೆ ನನ್ನೀ ಬಾಳಿನ ಒಲವಿನಲೆ!

ದೂರ ತೋರಿದಾ ನೀಲ ಬೆಟ್ಟಗಳ ನೀಲ ಮುಗಿಲಿನಲ್ಲಿ
ಮುಳುಗು ಸೂರ್ಯನಾ ಕೆಂಪು ಕಾಡಿಗೆಯ ಬಣ್ಣ ಮಡಿಲಿನಲ್ಲಿ
ತಾರೆ ಓರೆಯಲಿ ನಿಂತು ನೋಡುತಿರೆ, ಅಲೆಯು ಮೇಲೆ ಹೊಮ್ಮಿ
ಚಿಣ್ಣ ಚಿಣ್ಣನೇ ದುಗುಡ ಹನಿಗಳಲಿ ಹಾರುತಿಹುದು ಚಿಮ್ಮಿ!

ನಾವು ಪಡೆದುದಿದು; ಜೀವ ನೀಡಿದುದು; ಸಾವು ತಂದುದಿದನೆ?
ಕೇಳಿ ಕಾಡಿ ಯುಗ ಬಾಳ ವಿರಹದಲಿ ತಂದ ಹಸದ ಹದನೆ?
ಗಾಳಿ ಸೆರಗಿನಲಿ ಹೋಳುನಡೆಯುತಲಿ ಮುಗಿಲು ಸಿಡಿಯುವಂತೆ
ನನ್ನ ಬಾಳಿನಲಿ ಚೆನ್ನೆ ಸಾಗಿದಳು ತಾರೆ ಮರಳುವಂತೆ!

ಹಗಲು ಬರುವುದೋ? ಇರುಳು ಕಳೆವುದೋ? ಆಸೆ ಉಕ್ಕಲಹುದೇ?
ಬಾಳ ತುಂಬಿರುವ ಗೋಳ ಮರೆಯುತಲಿ ನಾಳೆ ಒಕ್ಕಲಹುದೆ?
ಚಿಂತೆ ಚಿತೆಗೆ ಬಲಿ ನಿಂತು ಉರಿಯುತಿಹ ತವಕಗೊಂಡ ಮನವ
ಶಾಂತಗೊಳಿಸಲೆಂದೆಂತು ನಡೆಸಿದರು ಕಾಣಲಿಲ್ಲ ಉಷೆಯ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರಿ ನಾಗರಗಳು
Next post ಬೀದಿ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…