ಜೈಲಿನ್ಕಂಡಿ

ರಚನೆ: ೫ನೆಯ ಸೆಪ್ಟೆಂಬರ್ ೧೯೪೨, ಮೈಸೂರು

ಮಾನವ ಜನ್ಮದಾಗ್ ಹುಟ್ಟಿದ್ಮೇಲೆ
ಏನೇನ್ಕಂಡಿ
ಜೀವನ್ದೊಳ್ಗೆ ಸಾಯೋತನ್ಕ
ಗಂಡಾಗುಂಡಿ.

ಲಕ್ಷ್ಮೀಪುರಂ ಸ್ಟೇಷನ್ನೊಳ್ಗೆ
ಕುಳಿತ್ಕೊಂಡಿ
ಬರೀತೇನೆ ಲಾವಣಿ ಒಂದು,
ಜೈಲಿನ್ಕಂಡಿ.

ಹಿಂದೆ ಎಂದೂ ಜೈಲಿನ್ಕಡ್ಗೆ
ಸುಳ್ದಿರ್ಲಿಲ್ಲ
ಜೈಲಿನ್ಜೀವ್ನ ಹೆಂಗಂಬೋದ್
ತಿಳ್ದಿರ್ಲಿಲ್ಲ!

ಸಾವಿರ್ದೊಂಬೈನೂರ ನಲ್ಪ.
ತ್ತೆರ್ಡ್ನೇ ಇಸ್ವಿ
ಸೆಪ್ಟೆಂಬರು ಐದ್ನೇ ತಾರೀಕ್
ಜೈಲಿಬಂದ್ವಿ!

ಪೋಲೀಸ್ನೋರು ಮೀಟಿಂಗಾದ್ಮೇಲ್
ನನ್ನನ್ಹಿಡ್ದ್ರು,
ನನ್ನೇಲ್ನಂಬ್ಕೆ ಇಲ್ದೋರಂಗೆ
ಬೀಗಾ ಜಡ್ದ್ರು;

ಲಾಕಪ್ನಾಗೆ ಸೇರಿತ್ತು
ಎರ್ಡಿಂಚ್ಕಸ
ಮಾಡೋದೆಂಗೆ ಎನ್ನಿಸ್ಬಿಡ್ತು
ಅದ್ರಾಗ್ವಾಸ!

ಮಧ್ಯೆ ಮಧ್ಯೆ ಟೆಲಿಫೋನ್ ಗಂಟೆ
ಹೊಡ್ಕೊಳ್ತಿತ್ತು
ಬೂಡ್ಸಿನ್ಧಕ್ಕೆಯೊಳ್ಗೆ ಎದೆ
ಧಸ್ಸೆನ್ತಿತ್ತು.

ಲಾಕಪ್ನಿಂದ ಹೊರಕ್ನೋಡೋಕ್
ಇತ್ತೊಂದ್ಕಿಂಡಿ
ಅದ್ರಿಂದೊಳ್ಗೆ ಗುಬ್ಬಚ್ಯೊಂದು
ಬರೋದ್ಕಂಡಿ.

ಹೊರಗ್ಗಾಳೀಲ್ ಕುಣ್ದಾಡ್ತಿದ್ವು
ಮರ್ದೆಲ್ಗೊಳು
ನಿಮ್ ಸ್ವಾತಂತ್ರ್ಯ ನಮ್ಗಿಲ್ವಲ್ಲ
ಅಯ್ಯೋ ಗೋಳು!

ಎಂಬೋ ಯೋಚ್ನೆ ತುಂಬಿ ಬಂತು
ಮನಸ್ನೊಳ್ಗೆ
ಕೆನ್ನೀರ್ತುಂಬ್ತು ತಕ್ಷಣ್ವೇನೆ
ಕಣ್ಣಿನೊಳ್ಗೆ!

ಕಣ್ಣೀರ್ನೊಳ್ಗೆ ಕಾಣ್ದೇಹೋಯ್ತು
ಜೈಲಿನ್ಕಟ್ಟು
ಬಿಚ್ಚಿ ಹೋಯ್ತು ಒಂದ್ ಕ್ಷಣ್ದಲ್ಲೆ
ಸ್ಪಪ್ನದ್ಕಟ್ಟು!
***

ಹಿಮಾಲಯ ಮಲೆ ಮೇಲೆ
ನಾಡಿನ್ಬಾವ್ಟ
ಹಾರ್ತಾ ಇದೆ ಅದರ್ಮೇಲೆ
ಬಾನಿನ್ಗುಮ್ಟ!

ಬಾವ್ಟದ್ಪಾದ ತೊಳೀತಿದೆ
ಗಂಗಾ ನದಿ
ಅದ್ಕೇ ಅದು ಭಾರತದಾಗೆ
ಪಾವನ ನದಿ!

ಬಾವ್ಟವನ್ನು ಹಿಡ್ದಿದ್ದಾರೆ
ಗಾಂಧೀಯೋರು
ಎಡ್ಬಲ್ದಲ್ಲಿ ಜವ್ಹರ್ಲಾಲು
ಆಜಾದರು.

ಎಲ್ಲೂ ಕೂಗ್ತಾರ್ “ಬೋಲೋ ಭಾರತ್
ಮಾತಾಕಿ ಜೈ”
ಭಾರತ್ಮಾತೆ ಉತ್ರ ಕೊಟ್ಳು
“ಗಾಂಧೀಕಿ ಜೈ!”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೊಡ್ಡವರು
Next post ಗಂಧವತಿ

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…