Home / ಕವನ / ಲಾವಣಿ / ಜೈಲಿನ್ಕಂಡಿ

ಜೈಲಿನ್ಕಂಡಿ

ರಚನೆ: ೫ನೆಯ ಸೆಪ್ಟೆಂಬರ್ ೧೯೪೨, ಮೈಸೂರು

ಮಾನವ ಜನ್ಮದಾಗ್ ಹುಟ್ಟಿದ್ಮೇಲೆ
ಏನೇನ್ಕಂಡಿ
ಜೀವನ್ದೊಳ್ಗೆ ಸಾಯೋತನ್ಕ
ಗಂಡಾಗುಂಡಿ.

ಲಕ್ಷ್ಮೀಪುರಂ ಸ್ಟೇಷನ್ನೊಳ್ಗೆ
ಕುಳಿತ್ಕೊಂಡಿ
ಬರೀತೇನೆ ಲಾವಣಿ ಒಂದು,
ಜೈಲಿನ್ಕಂಡಿ.

ಹಿಂದೆ ಎಂದೂ ಜೈಲಿನ್ಕಡ್ಗೆ
ಸುಳ್ದಿರ್ಲಿಲ್ಲ
ಜೈಲಿನ್ಜೀವ್ನ ಹೆಂಗಂಬೋದ್
ತಿಳ್ದಿರ್ಲಿಲ್ಲ!

ಸಾವಿರ್ದೊಂಬೈನೂರ ನಲ್ಪ.
ತ್ತೆರ್ಡ್ನೇ ಇಸ್ವಿ
ಸೆಪ್ಟೆಂಬರು ಐದ್ನೇ ತಾರೀಕ್
ಜೈಲಿಬಂದ್ವಿ!

ಪೋಲೀಸ್ನೋರು ಮೀಟಿಂಗಾದ್ಮೇಲ್
ನನ್ನನ್ಹಿಡ್ದ್ರು,
ನನ್ನೇಲ್ನಂಬ್ಕೆ ಇಲ್ದೋರಂಗೆ
ಬೀಗಾ ಜಡ್ದ್ರು;

ಲಾಕಪ್ನಾಗೆ ಸೇರಿತ್ತು
ಎರ್ಡಿಂಚ್ಕಸ
ಮಾಡೋದೆಂಗೆ ಎನ್ನಿಸ್ಬಿಡ್ತು
ಅದ್ರಾಗ್ವಾಸ!

ಮಧ್ಯೆ ಮಧ್ಯೆ ಟೆಲಿಫೋನ್ ಗಂಟೆ
ಹೊಡ್ಕೊಳ್ತಿತ್ತು
ಬೂಡ್ಸಿನ್ಧಕ್ಕೆಯೊಳ್ಗೆ ಎದೆ
ಧಸ್ಸೆನ್ತಿತ್ತು.

ಲಾಕಪ್ನಿಂದ ಹೊರಕ್ನೋಡೋಕ್
ಇತ್ತೊಂದ್ಕಿಂಡಿ
ಅದ್ರಿಂದೊಳ್ಗೆ ಗುಬ್ಬಚ್ಯೊಂದು
ಬರೋದ್ಕಂಡಿ.

ಹೊರಗ್ಗಾಳೀಲ್ ಕುಣ್ದಾಡ್ತಿದ್ವು
ಮರ್ದೆಲ್ಗೊಳು
ನಿಮ್ ಸ್ವಾತಂತ್ರ್ಯ ನಮ್ಗಿಲ್ವಲ್ಲ
ಅಯ್ಯೋ ಗೋಳು!

ಎಂಬೋ ಯೋಚ್ನೆ ತುಂಬಿ ಬಂತು
ಮನಸ್ನೊಳ್ಗೆ
ಕೆನ್ನೀರ್ತುಂಬ್ತು ತಕ್ಷಣ್ವೇನೆ
ಕಣ್ಣಿನೊಳ್ಗೆ!

ಕಣ್ಣೀರ್ನೊಳ್ಗೆ ಕಾಣ್ದೇಹೋಯ್ತು
ಜೈಲಿನ್ಕಟ್ಟು
ಬಿಚ್ಚಿ ಹೋಯ್ತು ಒಂದ್ ಕ್ಷಣ್ದಲ್ಲೆ
ಸ್ಪಪ್ನದ್ಕಟ್ಟು!
***

ಹಿಮಾಲಯ ಮಲೆ ಮೇಲೆ
ನಾಡಿನ್ಬಾವ್ಟ
ಹಾರ್ತಾ ಇದೆ ಅದರ್ಮೇಲೆ
ಬಾನಿನ್ಗುಮ್ಟ!

ಬಾವ್ಟದ್ಪಾದ ತೊಳೀತಿದೆ
ಗಂಗಾ ನದಿ
ಅದ್ಕೇ ಅದು ಭಾರತದಾಗೆ
ಪಾವನ ನದಿ!

ಬಾವ್ಟವನ್ನು ಹಿಡ್ದಿದ್ದಾರೆ
ಗಾಂಧೀಯೋರು
ಎಡ್ಬಲ್ದಲ್ಲಿ ಜವ್ಹರ್ಲಾಲು
ಆಜಾದರು.

ಎಲ್ಲೂ ಕೂಗ್ತಾರ್ “ಬೋಲೋ ಭಾರತ್
ಮಾತಾಕಿ ಜೈ”
ಭಾರತ್ಮಾತೆ ಉತ್ರ ಕೊಟ್ಳು
“ಗಾಂಧೀಕಿ ಜೈ!”
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...