ಜೈಲಿನ್ಕಂಡಿ

ರಚನೆ: ೫ನೆಯ ಸೆಪ್ಟೆಂಬರ್ ೧೯೪೨, ಮೈಸೂರು

ಮಾನವ ಜನ್ಮದಾಗ್ ಹುಟ್ಟಿದ್ಮೇಲೆ
ಏನೇನ್ಕಂಡಿ
ಜೀವನ್ದೊಳ್ಗೆ ಸಾಯೋತನ್ಕ
ಗಂಡಾಗುಂಡಿ.

ಲಕ್ಷ್ಮೀಪುರಂ ಸ್ಟೇಷನ್ನೊಳ್ಗೆ
ಕುಳಿತ್ಕೊಂಡಿ
ಬರೀತೇನೆ ಲಾವಣಿ ಒಂದು,
ಜೈಲಿನ್ಕಂಡಿ.

ಹಿಂದೆ ಎಂದೂ ಜೈಲಿನ್ಕಡ್ಗೆ
ಸುಳ್ದಿರ್ಲಿಲ್ಲ
ಜೈಲಿನ್ಜೀವ್ನ ಹೆಂಗಂಬೋದ್
ತಿಳ್ದಿರ್ಲಿಲ್ಲ!

ಸಾವಿರ್ದೊಂಬೈನೂರ ನಲ್ಪ.
ತ್ತೆರ್ಡ್ನೇ ಇಸ್ವಿ
ಸೆಪ್ಟೆಂಬರು ಐದ್ನೇ ತಾರೀಕ್
ಜೈಲಿಬಂದ್ವಿ!

ಪೋಲೀಸ್ನೋರು ಮೀಟಿಂಗಾದ್ಮೇಲ್
ನನ್ನನ್ಹಿಡ್ದ್ರು,
ನನ್ನೇಲ್ನಂಬ್ಕೆ ಇಲ್ದೋರಂಗೆ
ಬೀಗಾ ಜಡ್ದ್ರು;

ಲಾಕಪ್ನಾಗೆ ಸೇರಿತ್ತು
ಎರ್ಡಿಂಚ್ಕಸ
ಮಾಡೋದೆಂಗೆ ಎನ್ನಿಸ್ಬಿಡ್ತು
ಅದ್ರಾಗ್ವಾಸ!

ಮಧ್ಯೆ ಮಧ್ಯೆ ಟೆಲಿಫೋನ್ ಗಂಟೆ
ಹೊಡ್ಕೊಳ್ತಿತ್ತು
ಬೂಡ್ಸಿನ್ಧಕ್ಕೆಯೊಳ್ಗೆ ಎದೆ
ಧಸ್ಸೆನ್ತಿತ್ತು.

ಲಾಕಪ್ನಿಂದ ಹೊರಕ್ನೋಡೋಕ್
ಇತ್ತೊಂದ್ಕಿಂಡಿ
ಅದ್ರಿಂದೊಳ್ಗೆ ಗುಬ್ಬಚ್ಯೊಂದು
ಬರೋದ್ಕಂಡಿ.

ಹೊರಗ್ಗಾಳೀಲ್ ಕುಣ್ದಾಡ್ತಿದ್ವು
ಮರ್ದೆಲ್ಗೊಳು
ನಿಮ್ ಸ್ವಾತಂತ್ರ್ಯ ನಮ್ಗಿಲ್ವಲ್ಲ
ಅಯ್ಯೋ ಗೋಳು!

ಎಂಬೋ ಯೋಚ್ನೆ ತುಂಬಿ ಬಂತು
ಮನಸ್ನೊಳ್ಗೆ
ಕೆನ್ನೀರ್ತುಂಬ್ತು ತಕ್ಷಣ್ವೇನೆ
ಕಣ್ಣಿನೊಳ್ಗೆ!

ಕಣ್ಣೀರ್ನೊಳ್ಗೆ ಕಾಣ್ದೇಹೋಯ್ತು
ಜೈಲಿನ್ಕಟ್ಟು
ಬಿಚ್ಚಿ ಹೋಯ್ತು ಒಂದ್ ಕ್ಷಣ್ದಲ್ಲೆ
ಸ್ಪಪ್ನದ್ಕಟ್ಟು!
***

ಹಿಮಾಲಯ ಮಲೆ ಮೇಲೆ
ನಾಡಿನ್ಬಾವ್ಟ
ಹಾರ್ತಾ ಇದೆ ಅದರ್ಮೇಲೆ
ಬಾನಿನ್ಗುಮ್ಟ!

ಬಾವ್ಟದ್ಪಾದ ತೊಳೀತಿದೆ
ಗಂಗಾ ನದಿ
ಅದ್ಕೇ ಅದು ಭಾರತದಾಗೆ
ಪಾವನ ನದಿ!

ಬಾವ್ಟವನ್ನು ಹಿಡ್ದಿದ್ದಾರೆ
ಗಾಂಧೀಯೋರು
ಎಡ್ಬಲ್ದಲ್ಲಿ ಜವ್ಹರ್ಲಾಲು
ಆಜಾದರು.

ಎಲ್ಲೂ ಕೂಗ್ತಾರ್ “ಬೋಲೋ ಭಾರತ್
ಮಾತಾಕಿ ಜೈ”
ಭಾರತ್ಮಾತೆ ಉತ್ರ ಕೊಟ್ಳು
“ಗಾಂಧೀಕಿ ಜೈ!”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೊಡ್ಡವರು
Next post ಗಂಧವತಿ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys