Home / ಕವನ / ಲಾವಣಿ / ಜೈಲಿನ್ಕಂಡಿ

ಜೈಲಿನ್ಕಂಡಿ

ರಚನೆ: ೫ನೆಯ ಸೆಪ್ಟೆಂಬರ್ ೧೯೪೨, ಮೈಸೂರು

ಮಾನವ ಜನ್ಮದಾಗ್ ಹುಟ್ಟಿದ್ಮೇಲೆ
ಏನೇನ್ಕಂಡಿ
ಜೀವನ್ದೊಳ್ಗೆ ಸಾಯೋತನ್ಕ
ಗಂಡಾಗುಂಡಿ.

ಲಕ್ಷ್ಮೀಪುರಂ ಸ್ಟೇಷನ್ನೊಳ್ಗೆ
ಕುಳಿತ್ಕೊಂಡಿ
ಬರೀತೇನೆ ಲಾವಣಿ ಒಂದು,
ಜೈಲಿನ್ಕಂಡಿ.

ಹಿಂದೆ ಎಂದೂ ಜೈಲಿನ್ಕಡ್ಗೆ
ಸುಳ್ದಿರ್ಲಿಲ್ಲ
ಜೈಲಿನ್ಜೀವ್ನ ಹೆಂಗಂಬೋದ್
ತಿಳ್ದಿರ್ಲಿಲ್ಲ!

ಸಾವಿರ್ದೊಂಬೈನೂರ ನಲ್ಪ.
ತ್ತೆರ್ಡ್ನೇ ಇಸ್ವಿ
ಸೆಪ್ಟೆಂಬರು ಐದ್ನೇ ತಾರೀಕ್
ಜೈಲಿಬಂದ್ವಿ!

ಪೋಲೀಸ್ನೋರು ಮೀಟಿಂಗಾದ್ಮೇಲ್
ನನ್ನನ್ಹಿಡ್ದ್ರು,
ನನ್ನೇಲ್ನಂಬ್ಕೆ ಇಲ್ದೋರಂಗೆ
ಬೀಗಾ ಜಡ್ದ್ರು;

ಲಾಕಪ್ನಾಗೆ ಸೇರಿತ್ತು
ಎರ್ಡಿಂಚ್ಕಸ
ಮಾಡೋದೆಂಗೆ ಎನ್ನಿಸ್ಬಿಡ್ತು
ಅದ್ರಾಗ್ವಾಸ!

ಮಧ್ಯೆ ಮಧ್ಯೆ ಟೆಲಿಫೋನ್ ಗಂಟೆ
ಹೊಡ್ಕೊಳ್ತಿತ್ತು
ಬೂಡ್ಸಿನ್ಧಕ್ಕೆಯೊಳ್ಗೆ ಎದೆ
ಧಸ್ಸೆನ್ತಿತ್ತು.

ಲಾಕಪ್ನಿಂದ ಹೊರಕ್ನೋಡೋಕ್
ಇತ್ತೊಂದ್ಕಿಂಡಿ
ಅದ್ರಿಂದೊಳ್ಗೆ ಗುಬ್ಬಚ್ಯೊಂದು
ಬರೋದ್ಕಂಡಿ.

ಹೊರಗ್ಗಾಳೀಲ್ ಕುಣ್ದಾಡ್ತಿದ್ವು
ಮರ್ದೆಲ್ಗೊಳು
ನಿಮ್ ಸ್ವಾತಂತ್ರ್ಯ ನಮ್ಗಿಲ್ವಲ್ಲ
ಅಯ್ಯೋ ಗೋಳು!

ಎಂಬೋ ಯೋಚ್ನೆ ತುಂಬಿ ಬಂತು
ಮನಸ್ನೊಳ್ಗೆ
ಕೆನ್ನೀರ್ತುಂಬ್ತು ತಕ್ಷಣ್ವೇನೆ
ಕಣ್ಣಿನೊಳ್ಗೆ!

ಕಣ್ಣೀರ್ನೊಳ್ಗೆ ಕಾಣ್ದೇಹೋಯ್ತು
ಜೈಲಿನ್ಕಟ್ಟು
ಬಿಚ್ಚಿ ಹೋಯ್ತು ಒಂದ್ ಕ್ಷಣ್ದಲ್ಲೆ
ಸ್ಪಪ್ನದ್ಕಟ್ಟು!
***

ಹಿಮಾಲಯ ಮಲೆ ಮೇಲೆ
ನಾಡಿನ್ಬಾವ್ಟ
ಹಾರ್ತಾ ಇದೆ ಅದರ್ಮೇಲೆ
ಬಾನಿನ್ಗುಮ್ಟ!

ಬಾವ್ಟದ್ಪಾದ ತೊಳೀತಿದೆ
ಗಂಗಾ ನದಿ
ಅದ್ಕೇ ಅದು ಭಾರತದಾಗೆ
ಪಾವನ ನದಿ!

ಬಾವ್ಟವನ್ನು ಹಿಡ್ದಿದ್ದಾರೆ
ಗಾಂಧೀಯೋರು
ಎಡ್ಬಲ್ದಲ್ಲಿ ಜವ್ಹರ್ಲಾಲು
ಆಜಾದರು.

ಎಲ್ಲೂ ಕೂಗ್ತಾರ್ “ಬೋಲೋ ಭಾರತ್
ಮಾತಾಕಿ ಜೈ”
ಭಾರತ್ಮಾತೆ ಉತ್ರ ಕೊಟ್ಳು
“ಗಾಂಧೀಕಿ ಜೈ!”
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...