ಅವಳು ಕಾದಳು

ತಂಗಾಳಿ ಸೂಸಿ ಹಾಡಿದ ಜೋಗುಳ
ನಿಶ್ಶಬ್ದ ರಾತ್ರಿಯಲಿ ಜುಳು ಜುಳು
ನದಿಯೊಡಲ ತುಂಬ ಅವನ ಧ್ಯಾನ
ಬಾನ ಬುಡದಲಿ ಚಂದಿರನ ಬೆಳಕು
ಅವಳು ಕಾದಳು ಅವನ ಕೊಳಲನಾದಕ್ಕಾಗಿ.

ಹೂವಿನ ಪಕಳೆ ತುಂಬ ಗಂಧ
ವಲಸೆ ಹೋದ ಹಕ್ಕಿಗಳ ನೆರಳು
ತೆನೆ ತೂಗಿದ ಬಯಲ ಆಲಯ
ಮೌನವರಿಸಿದೆ ಕನವರಿಸಿದ ಕನಸುಗಳು
ಅವಳು ಕಾದಳು ಅವನ ಬಾಹು ಬಂಧನಕೆ.

ಮರೆಯದ ನೆನಪಿನ ಜಾಲ
ಬಳ್ಳಿಯಲಿ ಅರಳಿದ ದುಂಡು ಮಲ್ಲಿಗೆ
ದುಂಬಿಯ ಹಾರಾಟಕೆ ಮುದ
ಹೂ ತೋಟದ ತುಂಬ ಏಕಾಂತ ಸಂಜೆ
ಅವಳು ಕಾದಳು ಸಖ್ಯ ಸಖ್ಯ ಅನುಪಮದಲಿ.

ಅಂತರಾತ್ಮದ ಪಿಸುಗುಡುವ ಹಾಡು
ಅಂತರ್ಯವ ಕಲುಕಿ ಕರಗಿ
ಕಪ್ಪಿನ ಮೌನ ಕತ್ತಲೆ ರಾತ್ರಿ ಸರಿದು
ಸೂರ್ಯ ಉದಯಿಸಿದ ಉನ್ಮಾದದಲಿ
ಅವಳು ಕಾದಳು ಮನ್ವಂತರದ ಮರುಸೃಷ್ಟಿಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಓ ಮಧುರ ಮಾರುನುಡಿ !
Next post ಆಶ್ಚರ್ಯ

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…