Home / ಕವನ / ಕವಿತೆ / ನಾವು ಪ್ರೀತಿಸುವವರು

ನಾವು ಪ್ರೀತಿಸುವವರು

ಈ ದೇಶದಲಿ ನ್ಯಾಯ ನಿರ್ಣಯಕೆ
ಬಂದ್ ಆಚರಣೆ ಪ್ರಜೆಗಳ ತುಟಿಗಳಿಗೆ
ಹೊಲಿಗೆ ಹಾಕಿ ಬಿಗಿ ಬಂಧನ
ಪ್ರತಿ ದಿನದ ಒಂದು ಹೊತ್ತಿನ ಊಟಕೆ
ಪರದಾಡುವ ಕೂಲಿಗೆ ಯಾವ ಆದೇಶ
ಬೆಚ್ಚನೆಯ ಭರವಸೆ ಹುಟ್ಟು ಹಾಕೀತು
ದೂರಾದುಷ್ಠರ ಆಡಳಿತದ ಕಪಿ ಮುಷ್ಠಿಗೆ
ನಲುಗಿದ ಅವರಿವರ ಹೂವಿನ ಆತ್ಮಗಳು.

ನನ್ನ ಮಗಳಿಗೆ ಶಾಲೆಗೆ ರಜೆ ಘೋಷಿಸಿದ್ದಾರೆ
ಯಾಕೆ ಅಮ್ಮ ಅಂತ ಅವಳು ನೂರು ಬಾರಿ
ಕೇಳಿದ್ದಾಳೆ ಪ್ರಶ್ನೆಗಳಿಗೆ ನನ್ನಲ್ಲಿ ಉತ್ತರವಿಲ್ಲ
ಮಗಳ ಮುಂದಿನ ದಿನಗಳು ಕರಾಳ
ಹಾಯಾಗಿಲ್ಲ ಎಲ್ಲೆಲ್ಲೂ ಹತಾಶೆಗಳು
ದೇಶದಲ್ಲಿ ಸತ್ತವರು ಸತ್ತವರ ಗೋರಿಗಳು
ದ್ವೇಷವನ್ನೂ ರೋಷವನ್ನೂ ಹುಟ್ಟು ಹಾಕುತ್ತವೆ
ಮುಳ್ಳಿನ ಕಂಟಿಗಳಿಂದ ಶಾಂತಿ ಹೂಗಳ ಹೇಗೆ ತರಲಿ.

ಎಷ್ಟೊಂದು ಸಮಯ ಹಾಳು ಮಾಡುತ್ತಾರೆ
ದುಡಿಯುವ ಲಜ್ಜೆಗೇಡಿಗಳು ತಿಳಿಗೇಡಿನ
ಸೆಣಸಾಟದಲಿ, ಗದ್ದಲ ಎಬ್ಬಿಸುವುದು ಬಿಟ್ಟು
ಇನ್ನೇನು ಗೊತ್ತು ಜನರಿಗೆ ಗೊಂದಲ ಪುರದಲಿ
ಕೊನೆವರೆಗೂ ಉಳಿಯುವ ಕಣ್ಣೀರಿಗೆ
ಇವರೇಕೆ ಕೊಡಲಿ ಕಾವು ಹಚ್ಚುತ್ತಾರೆ
ಅಲ್ಲಿ ಒಂದು ಮಕ್ಕಳ ನಂದನವನ ಅರಳಲಿ
ನಾವು ಪ್ರೀತಿಸುವವರು ಸಿಗಲಿ ದೇವರೇ
ಈ ಜಗದಲಿ ಒಂದು ವಿಸ್ಮಯ ಮುಗುಳ್ನಗೆಯಲಿ.
*****

Tagged:

Leave a Reply

Your email address will not be published. Required fields are marked *

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...