Home / ಕವನ / ಕವಿತೆ / ನಾವು ಪ್ರೀತಿಸುವವರು

ನಾವು ಪ್ರೀತಿಸುವವರು

ಈ ದೇಶದಲಿ ನ್ಯಾಯ ನಿರ್ಣಯಕೆ
ಬಂದ್ ಆಚರಣೆ ಪ್ರಜೆಗಳ ತುಟಿಗಳಿಗೆ
ಹೊಲಿಗೆ ಹಾಕಿ ಬಿಗಿ ಬಂಧನ
ಪ್ರತಿ ದಿನದ ಒಂದು ಹೊತ್ತಿನ ಊಟಕೆ
ಪರದಾಡುವ ಕೂಲಿಗೆ ಯಾವ ಆದೇಶ
ಬೆಚ್ಚನೆಯ ಭರವಸೆ ಹುಟ್ಟು ಹಾಕೀತು
ದೂರಾದುಷ್ಠರ ಆಡಳಿತದ ಕಪಿ ಮುಷ್ಠಿಗೆ
ನಲುಗಿದ ಅವರಿವರ ಹೂವಿನ ಆತ್ಮಗಳು.

ನನ್ನ ಮಗಳಿಗೆ ಶಾಲೆಗೆ ರಜೆ ಘೋಷಿಸಿದ್ದಾರೆ
ಯಾಕೆ ಅಮ್ಮ ಅಂತ ಅವಳು ನೂರು ಬಾರಿ
ಕೇಳಿದ್ದಾಳೆ ಪ್ರಶ್ನೆಗಳಿಗೆ ನನ್ನಲ್ಲಿ ಉತ್ತರವಿಲ್ಲ
ಮಗಳ ಮುಂದಿನ ದಿನಗಳು ಕರಾಳ
ಹಾಯಾಗಿಲ್ಲ ಎಲ್ಲೆಲ್ಲೂ ಹತಾಶೆಗಳು
ದೇಶದಲ್ಲಿ ಸತ್ತವರು ಸತ್ತವರ ಗೋರಿಗಳು
ದ್ವೇಷವನ್ನೂ ರೋಷವನ್ನೂ ಹುಟ್ಟು ಹಾಕುತ್ತವೆ
ಮುಳ್ಳಿನ ಕಂಟಿಗಳಿಂದ ಶಾಂತಿ ಹೂಗಳ ಹೇಗೆ ತರಲಿ.

ಎಷ್ಟೊಂದು ಸಮಯ ಹಾಳು ಮಾಡುತ್ತಾರೆ
ದುಡಿಯುವ ಲಜ್ಜೆಗೇಡಿಗಳು ತಿಳಿಗೇಡಿನ
ಸೆಣಸಾಟದಲಿ, ಗದ್ದಲ ಎಬ್ಬಿಸುವುದು ಬಿಟ್ಟು
ಇನ್ನೇನು ಗೊತ್ತು ಜನರಿಗೆ ಗೊಂದಲ ಪುರದಲಿ
ಕೊನೆವರೆಗೂ ಉಳಿಯುವ ಕಣ್ಣೀರಿಗೆ
ಇವರೇಕೆ ಕೊಡಲಿ ಕಾವು ಹಚ್ಚುತ್ತಾರೆ
ಅಲ್ಲಿ ಒಂದು ಮಕ್ಕಳ ನಂದನವನ ಅರಳಲಿ
ನಾವು ಪ್ರೀತಿಸುವವರು ಸಿಗಲಿ ದೇವರೇ
ಈ ಜಗದಲಿ ಒಂದು ವಿಸ್ಮಯ ಮುಗುಳ್ನಗೆಯಲಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...