ಗಂಧವತಿ

ಅವನ ಮಣ್ಣ ಪ್ರೀತಿ
ಬಾಳಿಗೆ ಬಂಗಾರ ಸಿಂಗಾರ
ದಿನಾಲೂ ಬೀಸುವ ಗಾಳಿಯ
ನೆತ್ತಿ ನೇವರಿಸಿ ಮಣ್ಣನೊಡನೆ ಮಾತನಾಡಿ
ಅವಳ ಹಿಗ್ಗಿಸಿ ರೋಮಾಂಚನಗೊಳಿಸುತ್ತಾನೆ
ಗಂಧವತಿ ಅವಳು ಎದೆ ತೆರೆದು ಹಸಿರು ಸೂಸುತ್ತಾಳೆ.

ಮೆದುವಾದ ಅವಳು, ಅವನು
ಬಿತ್ತಿದ ಬೀಜಕೆ ಬಸಿರಾಗಿ,
ಹೊಲದ ತುಂಬೆಲ್ಲಾ ಹಸಿರು ತೆನೆಕಾಳು;
ಒಸರಿದ ಹಾಲು ಹೀರಿದ ಹಕ್ಕಿಗಳು ಹಾರಿವೆ
ನೀಲ ಗಗನದ ತುಂಬ ಗಾಳಿಪಟ ಹಾಸಿವೆ.
ಅವಳೀಗ ಅವನು ಪೂಜಿಸುವ ದೇವತೆ.

ಮೊದಲ ಹನಿ ಸಿಂಚನಕೆ ಅವನು
ಮೋಡಗಳ ತೆಕ್ಕೆಗೆ ಸರಿದು ಹೋಗಿದ್ದಾನೆ,
ಸಂತೆಯಿಂದ ತಂದ ಬೀಜಗಳ ಅವಳ
ಉಡಿತುಂಬ ಸುರಿದಿದ್ದಾನೆ, ಯಾರ
ಮೋಹದಲಿ ಯಾರ ಊಹೆಯಲಿ,
ಯಾವ ಕಾಳಿನ ಮರ್ಮರ ಯೋಗಿಣಿ?

ಅವನ ಒಲವಿಗೆ ಅವಳ ಚಿಗುರು,
ಬಗೆ ಬಗೆದು ಹಬ್ಬಿ ಸಿಂಗರಗೊಂಡ
ಬಯಲು ಧ್ಯಾನ, ಮರದೊಳಗಿನ ಮೌನ,
ಬೆಳಕಿನ ಹಣತೆ ಹಚ್ಚಿದಾಗ ಬೀಗುವ
ಅವನು ಅವಳ ಮಡಿಲ ಕೂಸು
ದಾಯಿನಿ ಗಂಧವತಿಯ ಒಳ ಹೊರಗೂ ಚೈತನ್ಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೈಲಿನ್ಕಂಡಿ
Next post ಸೂರ್ಯಾಲಂಕಾರ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…