ಮಾಗಿ

ಮುತ್ತಿನ ಹನಿಯ ಮಂಜು
ಮರ್ಮರದ ಗಾಳಿ ಬೀಸಿ
ಚಳಿಗಾಲದ ನೀಲ ಆಕಾಶ ಖಾಲಿ
ಒಡಲೊಳಗಿನ ಏಕಾಂತದ ಮೌನಕೆ
ಏನಾಗಿದೆ ಎಂಬುದು ಯಾರೂ ಕೇಳುವದಿಲ್ಲ.

ಕವಿತೆ ಹಾಡುವದಿಲ್ಲ. ಆಕಾಶದ
ಎತ್ತರಕೆ, ಅದಕೆ ಭೂಮಿಯ ಅನಿವಾರ್ಯತೆ
ಹೊತ್ತ ಕಂಬಳಿಯಡಿ ಹೊರಳಾಡಿವೆ
ಈ ನೆಲದ ಹಂಗು ಹಾಗೂ ನಿನ್ನ ನೆನಪು
ಚಳಿ ಎಲ್ಲವನ್ನೂ ಮುಕ್ಕಿಬಿಟ್ಟಿದೆ ಹಲ್ಲು ಕಟಗರಿಸುತ್ತ.

ಮಾತನಾಡುವರಿಲ್ಲ ಎದೆ ತೆರೆದು
ಇನ್ನೂ ಪ್ರಿಯವಾಗುವ ಸಂಗತಿಗಳಿಗಾಗಿ
ವರ್ತಮಾನದ ಹೇಳಿಕೆ ಯಾರಿಗೂ ಹಿತ
ಕೊಡುವದಿಲ್ಲ. ಎಲ್ಲರೂ ಅವರವರ
ನಿಲ್ದಾಣದಲಿ ಸುಮ್ಮನೆ ಇಳಿದು ಹೋಗಿದ್ದಾರೆ.

ಗಾಳಿಗೆ ನಿಲ್ಲಲು ಬರುವದಿಲ್ಲ ಚಳಿ
ನರನರಗಳಲಿ ಇಳಿದು ಕಂಪನ
ಸಹ್ಯ ಎಲ್ಲವೂ ಅಸಹ್ಯ ಎಲ್ಲೆಡೆ ಶೀತಲನೋಟ
ಶೂಲ ಶಿಲುಬೆಗೇರಿಸಿದ ತಾತ್ವಿಕ ನಿಲುವು
ಸರಿ ಎನಿಸುವದಿಲ್ಲ ಈ ಮಾಗಿಯ ಚಳಿಯಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಂದರ ಉಷಾ ಸ್ವಪ್ನ
Next post ದೀಪಾವಳಿ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys