ಮಾಗಿ

ಮುತ್ತಿನ ಹನಿಯ ಮಂಜು
ಮರ್ಮರದ ಗಾಳಿ ಬೀಸಿ
ಚಳಿಗಾಲದ ನೀಲ ಆಕಾಶ ಖಾಲಿ
ಒಡಲೊಳಗಿನ ಏಕಾಂತದ ಮೌನಕೆ
ಏನಾಗಿದೆ ಎಂಬುದು ಯಾರೂ ಕೇಳುವದಿಲ್ಲ.

ಕವಿತೆ ಹಾಡುವದಿಲ್ಲ. ಆಕಾಶದ
ಎತ್ತರಕೆ, ಅದಕೆ ಭೂಮಿಯ ಅನಿವಾರ್ಯತೆ
ಹೊತ್ತ ಕಂಬಳಿಯಡಿ ಹೊರಳಾಡಿವೆ
ಈ ನೆಲದ ಹಂಗು ಹಾಗೂ ನಿನ್ನ ನೆನಪು
ಚಳಿ ಎಲ್ಲವನ್ನೂ ಮುಕ್ಕಿಬಿಟ್ಟಿದೆ ಹಲ್ಲು ಕಟಗರಿಸುತ್ತ.

ಮಾತನಾಡುವರಿಲ್ಲ ಎದೆ ತೆರೆದು
ಇನ್ನೂ ಪ್ರಿಯವಾಗುವ ಸಂಗತಿಗಳಿಗಾಗಿ
ವರ್ತಮಾನದ ಹೇಳಿಕೆ ಯಾರಿಗೂ ಹಿತ
ಕೊಡುವದಿಲ್ಲ. ಎಲ್ಲರೂ ಅವರವರ
ನಿಲ್ದಾಣದಲಿ ಸುಮ್ಮನೆ ಇಳಿದು ಹೋಗಿದ್ದಾರೆ.

ಗಾಳಿಗೆ ನಿಲ್ಲಲು ಬರುವದಿಲ್ಲ ಚಳಿ
ನರನರಗಳಲಿ ಇಳಿದು ಕಂಪನ
ಸಹ್ಯ ಎಲ್ಲವೂ ಅಸಹ್ಯ ಎಲ್ಲೆಡೆ ಶೀತಲನೋಟ
ಶೂಲ ಶಿಲುಬೆಗೇರಿಸಿದ ತಾತ್ವಿಕ ನಿಲುವು
ಸರಿ ಎನಿಸುವದಿಲ್ಲ ಈ ಮಾಗಿಯ ಚಳಿಯಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಂದರ ಉಷಾ ಸ್ವಪ್ನ
Next post ದೀಪಾವಳಿ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys