Home / ಕವನ / ಕವಿತೆ / ನಿಲ್ದಾಣ

ನಿಲ್ದಾಣ

ಹಳಿಗಳ ಮೇಲೆ ಅಲೆದು
ಅಲೆದು ತಿರುವಿನ ಪಯಣ
ನನ್ನೊಳಗಿನ ಮಿತಿ ಮೀರಿ
ಬೀಸುಗಾಳಿಗೆ ಉಸಿರಾಡಿದ ಕನಸುಗಳು
ನಾನಿಳಿದ ನಿಲ್ದಾಣದ ತುಂಬ ಬರೀ ಅಪರಿಚಿತರು.

ಯಾರೊಳಗೆ ಯಾರಿಲ್ಲ ಬರೀ
ಕಣ್ಣೋಟಗಳು ಹೆಜ್ಜೆ ಹೆಜ್ಜೆಗೂ
ತವಕಗಳು ಅರಳಿದ ಹೂವಿನಿಂದ
ಒಮ್ಮೆಲೇ ಘಮ್ಮೆಂದು ಜೀವಧಾತು
ಮಿತಿ ಮೀರಿದ ಆಶೆಗಳು ಕೇಳಿದವು ಕಾರಣವ.

ಅಂತಃಪುರದ ಹೊರಗೆ ಅಂತರಂಗದ
ಒಳಗೆ ಬಯಲು ತಪಿಸಿ ಕಣ್ಮುಚ್ಚಿ
ಧ್ಯಾನಿಸಿದವು ಮಳೆಯ ಮಂಜನ ಸ್ನಾನ
ನಡೆದ ಪಾದ ಶಿರ ಭುಜಗಳೆಲ್ಲಾ
ದಂಗಾಗಿ ನಿಂತವು ತಮ್ಮ ಬಿರು ಚಲನೆಗೆ ಬೆರಗಾಗಿ.

ದುಃಖದ ಬೇಸರದ ವಿಷಾದದ ಖುಷಿಯ
ನೆರಳು ಹಿಂಬಾಲಿಸಿ ಯಾರ ಸ್ಮರಣೆಯಲಿ
ಸಿಹಿ ನಿದೆಯ ಆಳಕೆ ಇಳಿದ ಮುಖಗಳು
ಯಾವುದೂ ಕಹಿಯಲ್ಲ ಈ ಪ್ರೀತಿಯ ಜಗದಲಿ
ಕಾರಣವಿಲ್ಲದೇ ಸುಮ್ಮನೆ ಪಯಣಿಸಬೇಕಾಗಿದೆ.
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...