Home / ಲೇಖನ / ವಿಜ್ಞಾನ / ಯಂತ್ರ ವೈದ್ಯರು ಬರಲಿದ್ದಾರೆ!

ಯಂತ್ರ ವೈದ್ಯರು ಬರಲಿದ್ದಾರೆ!

೨೦೪೦ರ ಹೊತ್ತಿಗೆ ಅತಿಸೂಕ್ಷ್ಮ ಮತ್ತು ಪರಿಪೂರ್ಣ ರೋಬಟ್‌ಗಳನ್ನು ವಿಜ್ಞಾನಿಗಳು ಸಂಯೋಜಿಸುತ್ತಾರೆ. ಬ್ಯಾಕ್ಟೀರಿಯಾ ಗಾತ್ರದಲ್ಲೂ ಕೂಡ ಇವು ಇರುತ್ತವೆ. “ನ್ಯಾನೋ ಡಾಕ್ಸ್” ಎಂದು ಕರೆಯಲ್ಪಡುವ ರೋಬಟ್ ವೈದ್ಯನ ಶರೀರದಲ್ಲಿ ಸೂಕ್ಷ್ಮ ದರ್ಶಕಗಳನ್ನು ಅಳವಡಿಸಲಾಗಿದೆ. ಶರೀರಕ್ಕೆ ಹಾನಿಯುಂಟು ಮಾಡುವ ಸೂಕ್ಷ್ಮಜೀವಿಗಳು, ವಿಕೃತಗೊಂಡ ರಕ್ತಕಣಗಳು ಮತ್ತು ಕ್ಯಾನ್ಸರ್ ಕಣಗಳನ್ನು ಪತ್ತೆಹಚ್ಚುವ ದೃಶ್ಯ ವ್ಯವಸ್ಥೆಯ ‘ಮೆಮೋರಿ’ಯನ್ನು ಅಳವಡಿಸಲಾಗುತ್ತದೆ. ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇದ್ದಲ್ಲಿ ಇವು ರಕ್ತವನ್ನು ಶುದ್ಧಿಗೊಳಿಸುತ್ತವೆ. ಈ ನ್ಯಾನೋ ಇಂಜಿನ್‌ಗಳು (ರೋಬಟ್ ವೈದ್ಯ) ರೋಗಕಾರಕ ಸೂಕ್ಷ್ಮ ಜೀವಿಗಳನ್ನು ಗುರುತಿಸಿ ಅವುಗಳ ಹೊರಕವಚವನ್ನು ಭೇಧಿಸುವದರಿಂದ ಬಿಳಿ ರಕ್ತಕಣಗಳಿಗೆ ಆ ಸೂಕ್ಷ್ಮ ಜೀವಿಗಳನ್ನು ನಾಶಪಡಿಸಲು ಅನುಕೂಲವಾಗುತ್ತದೆ. ಹಲವಾರು ವರ್ಷಗಳಿಂದ ಶರೀರದಲ್ಲಿ ನೆಲೆಗೊಂಡ ಸೂಕ್ಷ್ಮಜೀವಿಗಳನ್ನು ಈ ರೋಬಟ್ ಇಂಜಿನ್‌ಗಳು ಪತ್ತೆಹಚ್ಚುತ್ತವೆ. ಬೋಸ್ಟನ ಕಾಲೇಜಿಗೆ ಸೇರಿದ ಟಿ. ರಾಸ್‌ಕೆಲ್ಲಿ ಮತ್ತು ತಂಡವು ಕೇವಲ ೭೮ ಪರಮಾಣುಗಳ ಒಂದು ನ್ಯಾನೋ ಇಂಜಿನನ್ನು ರೂಪಿಸಿದ್ದಾರೆ. ಜೀವಕೋಶಗಳಂತೆ ಅದು ಕೂಡ (ATP) ಅಣುವಿನಿಂದ ಶಕ್ತಿ ಪಡೆದು ಗ್ರಹಿಸುವುದು ವಿಶೇಷವಾದ ಸಂಗತಿ.

ಇಂತಹ ರೋಬಟ್ ಸರ್ಜನ್‌ಗಳು ಆಸ್ಪತ್ರೆಗಳು ಕಾಲಿಡುವ ದಿನ ಹತ್ತಿರದಲ್ಲಿದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...