ಶ್ರೀಮಂತ ಬಡವರು

ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ ಬಟ್ಟೆಯಂತಿತ್ತು ಅವಳ ಬದುಕು.

ಶಾಲೆಯಲ್ಲೂ ಅಷ್ಟೆ. ಅವಳಿಗೆ ಸ್ಪೆಷಲ್ಲಾಗಿ ಅಸನದ ವ್ಯವಸ್ಥೆ. ಎಲ್ಲರ ನಡವಳಿಕೆಗಳು ಅವಳಿಗೆ ಹಿತವೆನಿಸಿದ್ದವು. ಗೊಂಬೆಯಂತೆ ಕಾಣುತ್ತಿದ್ದ ಅವಳನ್ನು ಸಹಪಾಟಿಗಳು ಅದ್ಭುತವೆನ್ನುವಂತೆ ನೋಡುತ್ತಿದ್ದರು, ಮಾತನಾಡಲು ತವಕಿಸುತ್ತಿದ್ದರು.

ಒಂದಿನ ಒಬ್ಬ ಅಧ್ಯಾಪಕರು “ನಮ್ಮ ದೇಶದ ಬಡವರು” ಎಂಬ ವಿಷಯ ಕುರಿತು ಪ್ರಬಂಧ ಬರೆದುಕೊಂಡು ಬರಲು ಹೇಳಿದರು. ಮರುದಿನ ಎಲ್ಲರ ಪ್ರಬಂಧಗಳು ಅಧ್ಯಾಪಕರ ಕೈ ಸೇರಿದ್ದವು. ಎಲ್ಲ ವಿದ್ಯಾರ್ಥಿಗಳಿಗಿಂತ ಶ್ರೀಮಂತ ಹುಡುಗಿಯ ಪ್ರಬಂಧ ವಿಶೇಷವಾಗಿತ್ತು.

ಆಕೆ ಸುಂದರ ಅಕ್ಷರಗಳಲ್ಲಿ ನೀಟಾಗಿ ಬರೆದಿದ್ದಳು.

“ನಮ್ಮ ದೇಶದ ಬಡವರು ದೊಡ್ಡ ಬಂಗಲೆಗಳಲ್ಲಿ ವಾಸಿಸುವರು. ಅವರು ಕಾರಿನಲ್ಲಿ ಓಡಾಡುವರು. ಟಬ್‌ನಲ್ಲಿ ಸ್ನಾನ ಮಾಡುವರು. ಡೈನಿಂಗ್ ಟೇಬಲ್ ಮೇಲೆ ಕುಳಿತು ಟಿಫಿನ್, ಊಟ ಮಾಡುವರು. ಬ್ರೆಡ್ ಟೋಸ್ಟ್, ಬೆಣ್ಣೆ ದೋಸೆ, ಸಮೋಸಾ, ಪೇಡೆ, ಬರ್ಫಿ, ಗುಲಾಬ್ ಜಾಮೂನು ತಿನ್ನುವರು. ಹೋಳಿಗೆ, ತುಪ್ಪ, ಚಪಾತಿ, ಚಿತ್ರಾನ್ನ ಕೆನೆ ಮೊಸರು ಊಟ ಮಾಡುವರು. ಮುಂಜಾನೆ ಮತ್ತು ಸಂಜೆ ಗಟ್ಟಿಯಾದ ಹಾಲಿನ ಚಹ ಕುಡಿಯುವರು. ಸೇಬು, ಬಾಳೆಹಣ್ಣು, ದಾಳಂಬರಿ, ಕಿತ್ತಳೆ, ಮೋಸಂಬಿ, ಮಾವಿನ ಹಣ್ಣು, ದ್ರಾಕ್ಷಿ ಹಣ್ಣು ತಿನ್ನುವರು. ಬಿಸಲೇರಿ ನೀರು ಕುಡಿಯುವರು. ಟಿ.ವಿ. ನೋಡುವರು, ಮೆತ್ತನೆಯ ಮಂಚದ ಮೇಲೆ ಸೊಳ್ಳೆಪರದೆ ಕಟ್ಟಿಕೊಂಡು ಮಲಗುವರು. ನಸುಕಿನಲ್ಲೆದ್ದು ವಾಕಿಂಗ್ ಹೋಗುವರು, ಜಾಗಿಂಗ್ ಮಾಡುವರು….. ಇತ್ಯಾದಿ ಇತ್ಯಾದಿಯಾಗಿ ಪ್ರಬಂಧ ಮುಂದುವರಿದಿತ್ತು.

ಅಧ್ಯಾಪಕರಿಗೆ ಸುಸ್ತೋ ಸುಸ್ತು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋಕಾಲಿ ಆಡೋಣ ಬರ್ರೆ
Next post ಕೋಲು ಕೋಲಿನ ಕೋಲು

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys