Home / ಕಥೆ / ಕಿರು ಕಥೆ / ಶ್ರೀಮಂತ ಬಡವರು

ಶ್ರೀಮಂತ ಬಡವರು

ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ ಬಟ್ಟೆಯಂತಿತ್ತು ಅವಳ ಬದುಕು.

ಶಾಲೆಯಲ್ಲೂ ಅಷ್ಟೆ. ಅವಳಿಗೆ ಸ್ಪೆಷಲ್ಲಾಗಿ ಅಸನದ ವ್ಯವಸ್ಥೆ. ಎಲ್ಲರ ನಡವಳಿಕೆಗಳು ಅವಳಿಗೆ ಹಿತವೆನಿಸಿದ್ದವು. ಗೊಂಬೆಯಂತೆ ಕಾಣುತ್ತಿದ್ದ ಅವಳನ್ನು ಸಹಪಾಟಿಗಳು ಅದ್ಭುತವೆನ್ನುವಂತೆ ನೋಡುತ್ತಿದ್ದರು, ಮಾತನಾಡಲು ತವಕಿಸುತ್ತಿದ್ದರು.

ಒಂದಿನ ಒಬ್ಬ ಅಧ್ಯಾಪಕರು “ನಮ್ಮ ದೇಶದ ಬಡವರು” ಎಂಬ ವಿಷಯ ಕುರಿತು ಪ್ರಬಂಧ ಬರೆದುಕೊಂಡು ಬರಲು ಹೇಳಿದರು. ಮರುದಿನ ಎಲ್ಲರ ಪ್ರಬಂಧಗಳು ಅಧ್ಯಾಪಕರ ಕೈ ಸೇರಿದ್ದವು. ಎಲ್ಲ ವಿದ್ಯಾರ್ಥಿಗಳಿಗಿಂತ ಶ್ರೀಮಂತ ಹುಡುಗಿಯ ಪ್ರಬಂಧ ವಿಶೇಷವಾಗಿತ್ತು.

ಆಕೆ ಸುಂದರ ಅಕ್ಷರಗಳಲ್ಲಿ ನೀಟಾಗಿ ಬರೆದಿದ್ದಳು.

“ನಮ್ಮ ದೇಶದ ಬಡವರು ದೊಡ್ಡ ಬಂಗಲೆಗಳಲ್ಲಿ ವಾಸಿಸುವರು. ಅವರು ಕಾರಿನಲ್ಲಿ ಓಡಾಡುವರು. ಟಬ್‌ನಲ್ಲಿ ಸ್ನಾನ ಮಾಡುವರು. ಡೈನಿಂಗ್ ಟೇಬಲ್ ಮೇಲೆ ಕುಳಿತು ಟಿಫಿನ್, ಊಟ ಮಾಡುವರು. ಬ್ರೆಡ್ ಟೋಸ್ಟ್, ಬೆಣ್ಣೆ ದೋಸೆ, ಸಮೋಸಾ, ಪೇಡೆ, ಬರ್ಫಿ, ಗುಲಾಬ್ ಜಾಮೂನು ತಿನ್ನುವರು. ಹೋಳಿಗೆ, ತುಪ್ಪ, ಚಪಾತಿ, ಚಿತ್ರಾನ್ನ ಕೆನೆ ಮೊಸರು ಊಟ ಮಾಡುವರು. ಮುಂಜಾನೆ ಮತ್ತು ಸಂಜೆ ಗಟ್ಟಿಯಾದ ಹಾಲಿನ ಚಹ ಕುಡಿಯುವರು. ಸೇಬು, ಬಾಳೆಹಣ್ಣು, ದಾಳಂಬರಿ, ಕಿತ್ತಳೆ, ಮೋಸಂಬಿ, ಮಾವಿನ ಹಣ್ಣು, ದ್ರಾಕ್ಷಿ ಹಣ್ಣು ತಿನ್ನುವರು. ಬಿಸಲೇರಿ ನೀರು ಕುಡಿಯುವರು. ಟಿ.ವಿ. ನೋಡುವರು, ಮೆತ್ತನೆಯ ಮಂಚದ ಮೇಲೆ ಸೊಳ್ಳೆಪರದೆ ಕಟ್ಟಿಕೊಂಡು ಮಲಗುವರು. ನಸುಕಿನಲ್ಲೆದ್ದು ವಾಕಿಂಗ್ ಹೋಗುವರು, ಜಾಗಿಂಗ್ ಮಾಡುವರು….. ಇತ್ಯಾದಿ ಇತ್ಯಾದಿಯಾಗಿ ಪ್ರಬಂಧ ಮುಂದುವರಿದಿತ್ತು.

ಅಧ್ಯಾಪಕರಿಗೆ ಸುಸ್ತೋ ಸುಸ್ತು.

*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...