Home / ಕಥೆ / ಕಿರು ಕಥೆ / ಶ್ರೀಮಂತ ಬಡವರು

ಶ್ರೀಮಂತ ಬಡವರು

ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ ಬಟ್ಟೆಯಂತಿತ್ತು ಅವಳ ಬದುಕು.

ಶಾಲೆಯಲ್ಲೂ ಅಷ್ಟೆ. ಅವಳಿಗೆ ಸ್ಪೆಷಲ್ಲಾಗಿ ಅಸನದ ವ್ಯವಸ್ಥೆ. ಎಲ್ಲರ ನಡವಳಿಕೆಗಳು ಅವಳಿಗೆ ಹಿತವೆನಿಸಿದ್ದವು. ಗೊಂಬೆಯಂತೆ ಕಾಣುತ್ತಿದ್ದ ಅವಳನ್ನು ಸಹಪಾಟಿಗಳು ಅದ್ಭುತವೆನ್ನುವಂತೆ ನೋಡುತ್ತಿದ್ದರು, ಮಾತನಾಡಲು ತವಕಿಸುತ್ತಿದ್ದರು.

ಒಂದಿನ ಒಬ್ಬ ಅಧ್ಯಾಪಕರು “ನಮ್ಮ ದೇಶದ ಬಡವರು” ಎಂಬ ವಿಷಯ ಕುರಿತು ಪ್ರಬಂಧ ಬರೆದುಕೊಂಡು ಬರಲು ಹೇಳಿದರು. ಮರುದಿನ ಎಲ್ಲರ ಪ್ರಬಂಧಗಳು ಅಧ್ಯಾಪಕರ ಕೈ ಸೇರಿದ್ದವು. ಎಲ್ಲ ವಿದ್ಯಾರ್ಥಿಗಳಿಗಿಂತ ಶ್ರೀಮಂತ ಹುಡುಗಿಯ ಪ್ರಬಂಧ ವಿಶೇಷವಾಗಿತ್ತು.

ಆಕೆ ಸುಂದರ ಅಕ್ಷರಗಳಲ್ಲಿ ನೀಟಾಗಿ ಬರೆದಿದ್ದಳು.

“ನಮ್ಮ ದೇಶದ ಬಡವರು ದೊಡ್ಡ ಬಂಗಲೆಗಳಲ್ಲಿ ವಾಸಿಸುವರು. ಅವರು ಕಾರಿನಲ್ಲಿ ಓಡಾಡುವರು. ಟಬ್‌ನಲ್ಲಿ ಸ್ನಾನ ಮಾಡುವರು. ಡೈನಿಂಗ್ ಟೇಬಲ್ ಮೇಲೆ ಕುಳಿತು ಟಿಫಿನ್, ಊಟ ಮಾಡುವರು. ಬ್ರೆಡ್ ಟೋಸ್ಟ್, ಬೆಣ್ಣೆ ದೋಸೆ, ಸಮೋಸಾ, ಪೇಡೆ, ಬರ್ಫಿ, ಗುಲಾಬ್ ಜಾಮೂನು ತಿನ್ನುವರು. ಹೋಳಿಗೆ, ತುಪ್ಪ, ಚಪಾತಿ, ಚಿತ್ರಾನ್ನ ಕೆನೆ ಮೊಸರು ಊಟ ಮಾಡುವರು. ಮುಂಜಾನೆ ಮತ್ತು ಸಂಜೆ ಗಟ್ಟಿಯಾದ ಹಾಲಿನ ಚಹ ಕುಡಿಯುವರು. ಸೇಬು, ಬಾಳೆಹಣ್ಣು, ದಾಳಂಬರಿ, ಕಿತ್ತಳೆ, ಮೋಸಂಬಿ, ಮಾವಿನ ಹಣ್ಣು, ದ್ರಾಕ್ಷಿ ಹಣ್ಣು ತಿನ್ನುವರು. ಬಿಸಲೇರಿ ನೀರು ಕುಡಿಯುವರು. ಟಿ.ವಿ. ನೋಡುವರು, ಮೆತ್ತನೆಯ ಮಂಚದ ಮೇಲೆ ಸೊಳ್ಳೆಪರದೆ ಕಟ್ಟಿಕೊಂಡು ಮಲಗುವರು. ನಸುಕಿನಲ್ಲೆದ್ದು ವಾಕಿಂಗ್ ಹೋಗುವರು, ಜಾಗಿಂಗ್ ಮಾಡುವರು….. ಇತ್ಯಾದಿ ಇತ್ಯಾದಿಯಾಗಿ ಪ್ರಬಂಧ ಮುಂದುವರಿದಿತ್ತು.

ಅಧ್ಯಾಪಕರಿಗೆ ಸುಸ್ತೋ ಸುಸ್ತು.

*****

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...