Home / ಕಥೆ / ಕಿರು ಕಥೆ / ಶ್ರೀಮಂತ ಬಡವರು

ಶ್ರೀಮಂತ ಬಡವರು

ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ ಬಟ್ಟೆಯಂತಿತ್ತು ಅವಳ ಬದುಕು.

ಶಾಲೆಯಲ್ಲೂ ಅಷ್ಟೆ. ಅವಳಿಗೆ ಸ್ಪೆಷಲ್ಲಾಗಿ ಅಸನದ ವ್ಯವಸ್ಥೆ. ಎಲ್ಲರ ನಡವಳಿಕೆಗಳು ಅವಳಿಗೆ ಹಿತವೆನಿಸಿದ್ದವು. ಗೊಂಬೆಯಂತೆ ಕಾಣುತ್ತಿದ್ದ ಅವಳನ್ನು ಸಹಪಾಟಿಗಳು ಅದ್ಭುತವೆನ್ನುವಂತೆ ನೋಡುತ್ತಿದ್ದರು, ಮಾತನಾಡಲು ತವಕಿಸುತ್ತಿದ್ದರು.

ಒಂದಿನ ಒಬ್ಬ ಅಧ್ಯಾಪಕರು “ನಮ್ಮ ದೇಶದ ಬಡವರು” ಎಂಬ ವಿಷಯ ಕುರಿತು ಪ್ರಬಂಧ ಬರೆದುಕೊಂಡು ಬರಲು ಹೇಳಿದರು. ಮರುದಿನ ಎಲ್ಲರ ಪ್ರಬಂಧಗಳು ಅಧ್ಯಾಪಕರ ಕೈ ಸೇರಿದ್ದವು. ಎಲ್ಲ ವಿದ್ಯಾರ್ಥಿಗಳಿಗಿಂತ ಶ್ರೀಮಂತ ಹುಡುಗಿಯ ಪ್ರಬಂಧ ವಿಶೇಷವಾಗಿತ್ತು.

ಆಕೆ ಸುಂದರ ಅಕ್ಷರಗಳಲ್ಲಿ ನೀಟಾಗಿ ಬರೆದಿದ್ದಳು.

“ನಮ್ಮ ದೇಶದ ಬಡವರು ದೊಡ್ಡ ಬಂಗಲೆಗಳಲ್ಲಿ ವಾಸಿಸುವರು. ಅವರು ಕಾರಿನಲ್ಲಿ ಓಡಾಡುವರು. ಟಬ್‌ನಲ್ಲಿ ಸ್ನಾನ ಮಾಡುವರು. ಡೈನಿಂಗ್ ಟೇಬಲ್ ಮೇಲೆ ಕುಳಿತು ಟಿಫಿನ್, ಊಟ ಮಾಡುವರು. ಬ್ರೆಡ್ ಟೋಸ್ಟ್, ಬೆಣ್ಣೆ ದೋಸೆ, ಸಮೋಸಾ, ಪೇಡೆ, ಬರ್ಫಿ, ಗುಲಾಬ್ ಜಾಮೂನು ತಿನ್ನುವರು. ಹೋಳಿಗೆ, ತುಪ್ಪ, ಚಪಾತಿ, ಚಿತ್ರಾನ್ನ ಕೆನೆ ಮೊಸರು ಊಟ ಮಾಡುವರು. ಮುಂಜಾನೆ ಮತ್ತು ಸಂಜೆ ಗಟ್ಟಿಯಾದ ಹಾಲಿನ ಚಹ ಕುಡಿಯುವರು. ಸೇಬು, ಬಾಳೆಹಣ್ಣು, ದಾಳಂಬರಿ, ಕಿತ್ತಳೆ, ಮೋಸಂಬಿ, ಮಾವಿನ ಹಣ್ಣು, ದ್ರಾಕ್ಷಿ ಹಣ್ಣು ತಿನ್ನುವರು. ಬಿಸಲೇರಿ ನೀರು ಕುಡಿಯುವರು. ಟಿ.ವಿ. ನೋಡುವರು, ಮೆತ್ತನೆಯ ಮಂಚದ ಮೇಲೆ ಸೊಳ್ಳೆಪರದೆ ಕಟ್ಟಿಕೊಂಡು ಮಲಗುವರು. ನಸುಕಿನಲ್ಲೆದ್ದು ವಾಕಿಂಗ್ ಹೋಗುವರು, ಜಾಗಿಂಗ್ ಮಾಡುವರು….. ಇತ್ಯಾದಿ ಇತ್ಯಾದಿಯಾಗಿ ಪ್ರಬಂಧ ಮುಂದುವರಿದಿತ್ತು.

ಅಧ್ಯಾಪಕರಿಗೆ ಸುಸ್ತೋ ಸುಸ್ತು.

*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...