ನಮ್ಮ ಬಾಪೂ

ಒಂದೆ ಹಿಡಿಮೂಳೆ ಚಕ್ಕಳ ಅಷ್ಟೆ; ಅದಕೆ ಸುರಿ
ಮೂರುನಾಲ್ಕೋ ಚಮಚ ರಕ್ತ, ಮಾಂಸ, ಜೊತೆಗಿರಿಸು
ವಾಪವಂ ನೆರೆತೆರೆದ ಕಡಲಿನಾಳದ ಮನಸ,
ನೆರೆಬಂದ ಕಡಲಿನೊಲ್ ಪ್ರೇಮವಂ ತುಂಬಿದೆದೆಯ;
ಹುಚ್ಚು- ಮೊರಕಿವಿಯೆರಡ, ಎರಡು ಪಿಳಿಪಿಳಿ ಕಣ್ಣ;
ಹಾಲುಹಸುಳೆಯ ಮಂದಹಾಸವನ್ನು ಲೇಪಿಸದಕೆ,
ಒಳಗಿರಿಸು, ಜೇನು ನಗುವವೊಲಿನಿಯ ನಾಲಿಗೆಯ
ಮೇಣ್ ಹಿಮಗಿರಿಯ ಮೀರಿಸಿ ನಿಮಿರ್ದ ಹಿರಿಯಾತ್ಮವ.

ಪೂರಣವೊ? ನೋಯಬೀನ್ಸ್‌, ಖರ್ಜೂರ, ಮೇಕೆ ಹಾಲು!
ಮೇಲಿನಂಚಿನವರೆಗು ದುಃಖಿಗಳ ಕಣ್ಣೀರು ತುಂಬಿ
ಪಕ್ವಮಾಡಿ ಇದನು ಸೆರೆಮನೆಯೊಳೊಂದಿನಿತು ವರುಷ
ಹೊರಗೆ ತೆಗೆ ವರಯ ಪರಿವಾರದಿಂ ಗಮಗಮಿಸಗೊಳಿಸಿ,
ಚಿಂದಿಯಂ ಸುತ್ತಿ, ಸೆಳಬೊಂಬಿನಾಲಂಬವನ್ನಿತ್ತು
ಬಡಿಸು ತಾ? ಅವನೆ ಕಾಣ್! ಲೋಕತಾರಕ! ನಮ್ಮಬಾಪೂ!
*****

ಅನುವಾದ – ಜಿ. ಪಿ. ರಾಜರತ್ನಂ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸತ್ಯ
Next post ಬಹುರೂಪಿ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys