ಬಹುರೂಪಿ

“ಇವರು ಯಾರು” ಎಂದು ಗಾಂಧಿಯವರ ಕುರಿತು ಬಗೆವರೆ
ಅವರು ಒಬ್ಬರಲ್ಲ, ಹಲವು ರೂಪಿನವರು ಕಾಣರೇ ?

ರಾಟಿಕಾಮಧೇನುವಿರುವ ತವಸಿ ವರವಸಿಷ್ಠನು
ಕೋಟಿ ವಿಘ್ನಗಳಲಿ ಸತ್ಯಬಿಡದ ಹರಿಶ್ಚಂದ್ರನು ||
ಘೋರಸಾಸದಿಂದ ಸೃಷ್ಟಿ ಗೈದ ವಿಶ್ವಾಮಿತ್ರನು
ಘೋರಹಿಂಸೆ ಕರುಣೆಯಿಂದ ಮುರಿಯನಿಂತ ಬುದ್ಧನು ||
ದನುಜಬಲವ ದೈವಶಕ್ತಿಯಿಂದ ಮುರಿದಕೃಷ್ಣನು
ಮನುಜಕುಲವ ಪ್ರೇಮದಿಂದ ಗೆಲಲುನಿಂತ ಕ್ರಿಸ್ತನು ||
ತಂದೆಯಾಜ್ಞೆಯಂತೆ ಮನಸಿನೊಲವ ತೊರೆದ ರಾಮನು
ಒಂದುಘೋರ ಆಣೆಯಿಟ್ಟು ಕೊಂಡು ನಡೆದ ಭೀಷ್ಮನು ||
ದಿವ್ಯ ನೆರವಿನಿಂದ ಗುರಿಯ ಹೊಡೆವ ಇಂದ್ರತನುಜನು
ಭವ್ಯ ಕರ್ಮಯೋಗನಿರತ ದಿವ್ಯ ತೇಜ ಸೂರ್ಯನು ||
ಮರಣಹಿಂಸೆಯಲ್ಲು ಭಕ್ತಿ ಬಿಡದ ಪ್ರಹ್ಲಾದನು
ಪರಮಸೇವೆಗಸ್ಥಿ ಬಿಡುವ ಆ ದಧೀಚಿವರ್ಯನು ||
ನಲ್ಲೆಯಲ್ಲಿ ದೈವರೂಪಕಂಡ ರಾಮಕೃಷ್ಣನು
ಹೊಲೆಯರನ್ನು ಹರಿಯಜನರಗೈದ ಪುಣ್ಯವಂಶನು ||
ಬಗೆದರಷ್ಟು ಬಗೆಯಭಾವ ಬೆಳಗುವಾ ಮಹಾತ್ಮನು
ಜಗದಜನ್ಮ ಸುಟ್ಟ ಯುಗದ ಜೀವನಾ ದ್ವಿಜಾತ್ಮನು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮ ಬಾಪೂ
Next post ಉಗುರು ೩

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…