Home / ಕಥೆ / ಕಿರು ಕಥೆ / ನಕ್ಕಾಂವ ಗೆದ್ದಾಂವ

ನಕ್ಕಾಂವ ಗೆದ್ದಾಂವ

ಪತ್ರಕರ್ತನೊಬ್ಬ ಆ ಕಲಾವಿದನನ್ನು ಸಂದರ್ಶಿಸಲು ಬಂದ. ರಂಗಭೂಮಿ ಮತ್ತು ಸಿನಿಮಾ ಎರಡರಲ್ಲೂ ತನ್ನ ಹಾಸ್ಯ ನಟನೆಯಿಂದ ಪ್ರಖ್ಯಾತಿ ಪಡೆದ ಕಲಾವಿದನ ಎದುರು ಕುಳಿತು ನೇರವಾಗಿ ಮಾತಿಗಿಳಿದ:

“ನಿಮಗೆ ನಗಿಸುವ ಕಲೆ ಹೇಗೆ ಕರಗತವಾಯಿತು?”

“ದುಃಖದ ಕಡಲಲ್ಲಿ ಮುಳುಮುಳುಗಿ ಎದ್ದಿದ್ದರಿಂದ” ಕಲಾವಿದ ಉತ್ತರಿಸಿದ.

“ನೀವು ಅಳುವ ಪಾತ್ರಗಳನ್ನು ಮಾಡಲೇ ಇಲ್ಲ.”

“ಅಳುವವರನ್ನು ಈ ಜಗತ್ತು ಇಷ್ಟ ಪಡುವುದಿಲ್ಲ.”

“ನಿಮ್ಮ ನಗೆಯ ಹಿಂದೆ ನೋವು ಅಡಗಿರುವುದೆಂದು ಅನುಮಾನ ನನಗೆ.”

“ಆ ನೋವು ನನ್ನದು. ಅದು ನನ್ನೊಂದಿಗೆ ಕೊನೆಯಾಗುವುದು.”

“ದುಃಖವನ್ನು ಪ್ರಪಂಚದೊಂದಿಗೆ ಹಂಚಿಕೊಂಡರೆ ನೆಮ್ಮದಿ ಅನಿಸುವುದು.”

“ಜನರು ಯಾವಾಗಲೂ ಸಂತೋಷದ ಸಂಗತಿಗಳನ್ನು ಬಯಸುತ್ತಾರೆ. ಅವರೆದೆಗೆ ಸಂಕಟದ ಕಣ್ಣೀರು ಬಸಿದು ತಳಮಳಿಸುವ ಇಚ್ಛೆ ಇಲ್ಲ.”

“ನಿಮ್ಮ ಮಗನೊಬ್ಬ ಕಾರು ಅಪಘಾತದಲ್ಲಿ ತೀರಿಕೊಂಡನೆಂದು ಕೇಳಿದೆ.”

“ವಯಸ್ಸಿಗೆ ಬಂದ ಒಬ್ಬನೇ ಮಗನಿಗೆ ಕಿಚ್ಚು ಇಟ್ಟೆ. ಒಬ್ಬ ಮಗಳು ಅಳಿಯನಿಂದ ಸುಡಿಸಿಕೊಂಡು ಬೂದಿಯಾದಳು. ಎರಡನೆಯ ಮಗಳು ಕಾರು ಡ್ರೈವರ್‌ನೊಂದಿಗೆ ಓಡಿಹೋದಳು. ಮೊದಲ ಹೆಂಡತಿ ಕ್ಯಾನ್ಸರ್‌ನಿಂದ ಸತ್ತಳು. ನನ್ನನ್ನೇ ಪ್ರೀಮಿಸುವ ನಾಟಕವಾಡಿ ಬಂದ ಸತಿ ಶಿರೋಮಣಿ ನನ್ನ ಸಂಪತ್ತು ದೋಚಿಕೊಂಡು ಪರಾರಿಯಾದಳು. ಕೆಲವು ನಿರ್ಮಾಪಕರು ನನಗೆ ಹಣ ಕೊಡದೆ ವಂಚಿಸಿದರು. ಆದರೂ ದೇವರು ನನ್ನನ್ನು ಉಳಿಸಿದ್ದಾನೆ. ಬಹುಶಃ ಲೋಕದ ದುಃಖಿತರನ್ನು ನಗಿಸಲೆಂದೇ ಇರಬೇಕು” ಪಕಪಕನೆ ನಕ್ಕ ಕಲಾವಿದ.

“ನಿಮ್ಮ ಸಹನೆ ಅದ್ಭುತ”

“ಬದುಕಿನ ಪ್ರೀತಿ ಇದ್ದವರಿಗೆ ಸಮಾಧಾನವೂ ಇರಬೇಕು. ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ರಂಗಭೂಮಿಯಲ್ಲಿ ದುಡಿದಿದ್ದೇನೆ. ಜನರು ನನ್ನ ನಗೆಯಿಂದ ಸಂತೋಷ ಪಡುತ್ತಾರೆ. ಅವರಿಂದ ನನಗೆ ತೃಪ್ತಿಯಿದೆ”.

“ಕೊನೆಗೊಂದು ಪ್ರಶ್ನೆ. ನಾಡಿಗೆ ನಿಮ್ಮ ಸಂದೇಶವೇನು?”

“ನಾನು ಮಹಾತ್ಮನಲ್ಲ, ಪವಾಡಪುರುಷನೂ ಅಲ್ಲ, ದೇವರು ನನಗೆ ನಗಿಸುವ ಕಲೆ ಕೊಟ್ಟಿದ್ದಾನೆ. ಈ ಜೀವ ಇರುವತನಕ ಅಳುವವರನ್ನು ನಾನು ನಗಿಸುತ್ತಲೇ ಇರುತ್ತೇನೆ. ಕವಿಯೊಬ್ಬರು ಹೇಳಿದ್ದಾರೆ ನಕ್ಕಾವ ಗೆದ್ದಾಂವ ಅಂತ. ಅಳುವವರಿಗೆ ಇಲ್ಲಿ ಬದುಕಿಲ್ಲ” ಮತ್ತೆ ನಕ್ಕ ಕಲಾವಿದ.

 

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...