Home / ಕಥೆ / ಕಿರು ಕಥೆ / ನಕ್ಕಾಂವ ಗೆದ್ದಾಂವ

ನಕ್ಕಾಂವ ಗೆದ್ದಾಂವ

ಪತ್ರಕರ್ತನೊಬ್ಬ ಆ ಕಲಾವಿದನನ್ನು ಸಂದರ್ಶಿಸಲು ಬಂದ. ರಂಗಭೂಮಿ ಮತ್ತು ಸಿನಿಮಾ ಎರಡರಲ್ಲೂ ತನ್ನ ಹಾಸ್ಯ ನಟನೆಯಿಂದ ಪ್ರಖ್ಯಾತಿ ಪಡೆದ ಕಲಾವಿದನ ಎದುರು ಕುಳಿತು ನೇರವಾಗಿ ಮಾತಿಗಿಳಿದ:

“ನಿಮಗೆ ನಗಿಸುವ ಕಲೆ ಹೇಗೆ ಕರಗತವಾಯಿತು?”

“ದುಃಖದ ಕಡಲಲ್ಲಿ ಮುಳುಮುಳುಗಿ ಎದ್ದಿದ್ದರಿಂದ” ಕಲಾವಿದ ಉತ್ತರಿಸಿದ.

“ನೀವು ಅಳುವ ಪಾತ್ರಗಳನ್ನು ಮಾಡಲೇ ಇಲ್ಲ.”

“ಅಳುವವರನ್ನು ಈ ಜಗತ್ತು ಇಷ್ಟ ಪಡುವುದಿಲ್ಲ.”

“ನಿಮ್ಮ ನಗೆಯ ಹಿಂದೆ ನೋವು ಅಡಗಿರುವುದೆಂದು ಅನುಮಾನ ನನಗೆ.”

“ಆ ನೋವು ನನ್ನದು. ಅದು ನನ್ನೊಂದಿಗೆ ಕೊನೆಯಾಗುವುದು.”

“ದುಃಖವನ್ನು ಪ್ರಪಂಚದೊಂದಿಗೆ ಹಂಚಿಕೊಂಡರೆ ನೆಮ್ಮದಿ ಅನಿಸುವುದು.”

“ಜನರು ಯಾವಾಗಲೂ ಸಂತೋಷದ ಸಂಗತಿಗಳನ್ನು ಬಯಸುತ್ತಾರೆ. ಅವರೆದೆಗೆ ಸಂಕಟದ ಕಣ್ಣೀರು ಬಸಿದು ತಳಮಳಿಸುವ ಇಚ್ಛೆ ಇಲ್ಲ.”

“ನಿಮ್ಮ ಮಗನೊಬ್ಬ ಕಾರು ಅಪಘಾತದಲ್ಲಿ ತೀರಿಕೊಂಡನೆಂದು ಕೇಳಿದೆ.”

“ವಯಸ್ಸಿಗೆ ಬಂದ ಒಬ್ಬನೇ ಮಗನಿಗೆ ಕಿಚ್ಚು ಇಟ್ಟೆ. ಒಬ್ಬ ಮಗಳು ಅಳಿಯನಿಂದ ಸುಡಿಸಿಕೊಂಡು ಬೂದಿಯಾದಳು. ಎರಡನೆಯ ಮಗಳು ಕಾರು ಡ್ರೈವರ್‌ನೊಂದಿಗೆ ಓಡಿಹೋದಳು. ಮೊದಲ ಹೆಂಡತಿ ಕ್ಯಾನ್ಸರ್‌ನಿಂದ ಸತ್ತಳು. ನನ್ನನ್ನೇ ಪ್ರೀಮಿಸುವ ನಾಟಕವಾಡಿ ಬಂದ ಸತಿ ಶಿರೋಮಣಿ ನನ್ನ ಸಂಪತ್ತು ದೋಚಿಕೊಂಡು ಪರಾರಿಯಾದಳು. ಕೆಲವು ನಿರ್ಮಾಪಕರು ನನಗೆ ಹಣ ಕೊಡದೆ ವಂಚಿಸಿದರು. ಆದರೂ ದೇವರು ನನ್ನನ್ನು ಉಳಿಸಿದ್ದಾನೆ. ಬಹುಶಃ ಲೋಕದ ದುಃಖಿತರನ್ನು ನಗಿಸಲೆಂದೇ ಇರಬೇಕು” ಪಕಪಕನೆ ನಕ್ಕ ಕಲಾವಿದ.

“ನಿಮ್ಮ ಸಹನೆ ಅದ್ಭುತ”

“ಬದುಕಿನ ಪ್ರೀತಿ ಇದ್ದವರಿಗೆ ಸಮಾಧಾನವೂ ಇರಬೇಕು. ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ರಂಗಭೂಮಿಯಲ್ಲಿ ದುಡಿದಿದ್ದೇನೆ. ಜನರು ನನ್ನ ನಗೆಯಿಂದ ಸಂತೋಷ ಪಡುತ್ತಾರೆ. ಅವರಿಂದ ನನಗೆ ತೃಪ್ತಿಯಿದೆ”.

“ಕೊನೆಗೊಂದು ಪ್ರಶ್ನೆ. ನಾಡಿಗೆ ನಿಮ್ಮ ಸಂದೇಶವೇನು?”

“ನಾನು ಮಹಾತ್ಮನಲ್ಲ, ಪವಾಡಪುರುಷನೂ ಅಲ್ಲ, ದೇವರು ನನಗೆ ನಗಿಸುವ ಕಲೆ ಕೊಟ್ಟಿದ್ದಾನೆ. ಈ ಜೀವ ಇರುವತನಕ ಅಳುವವರನ್ನು ನಾನು ನಗಿಸುತ್ತಲೇ ಇರುತ್ತೇನೆ. ಕವಿಯೊಬ್ಬರು ಹೇಳಿದ್ದಾರೆ ನಕ್ಕಾವ ಗೆದ್ದಾಂವ ಅಂತ. ಅಳುವವರಿಗೆ ಇಲ್ಲಿ ಬದುಕಿಲ್ಲ” ಮತ್ತೆ ನಕ್ಕ ಕಲಾವಿದ.

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...