Home / ಕವನ / ಕವಿತೆ / ದೀಪ ಆರದಿರಲಿ

ದೀಪ ಆರದಿರಲಿ

ಎಷ್ಟು ದಿನಾದರು ಇಷ್ಟಿಷ್ಟೆ ಆಶೆಗಳು
ನಷ್ಟವಾಗುತಾವೆ ಮನದಾಗೆ
ತೇಲುವ ಕನಸೆಲ್ಲ ಆವ್ಯಾಗಿ ಹೋಗ್ತಾವೆ
ಇಳಿವಲ್ದು ಮಳೆಯಾಗಿ ನೆಲದಾಗೆ

ಕಾಲಕಾಲಕು ನಿನ್ನ ಕರಿತಾನೆ ಬದುಕೀನಿ
ಕರೆಯೋದು ಒಂದೇ ಕೊನೆಯಾಸೆ
ಏನೆಲ್ಲ ಇದ್ರೂನು ಏನೆಲ್ಲ ಬಂದ್ರೂನು
ಕೊರಗೋದು ತಪ್ಪಿಲ್ಲ ಅಳಿಯಾಸೆ

ಅಂದುಕೊಂಡದ್ದಲ್ಲ ಅವಲಕ್ಷಣಾದೀತು
ಆಶೆ ಮಾಡಿದ್ದು ಹುಸಿಯಾತು
ಮಾಡಿದ್ದು ಮುಟ್ಟಿದ್ದು ಎಡವಟ್ಟೆ ಆದೀತು
ಕನಸಿನ ಮಂಟಪ ಕುಸಿದಿತ್ತು

ಆಶೆಯ ಉಸುಗೀನ ಗೂಡನ್ನು ಕಟ್ಟೋದು
ಅಲೆ ಬಂದು ಅದನಾ ಕೆಡಿಸೋದು
ಬಣ್ಣದ ಕನಸಿನ ಕಾಮನ ಬಿಲ್ಲಾಗಿ
ಅಗೋ ಅನ್ನದ್ರಾಗ ಅಳಿಸೋದು

ಕನಸಿನ ಗೋಪುರ ಕಟ್ಟೋದು ಬೀಳೋದು
ನಡೆದಾದ ಬದುಕಿನ ಈ ಯಾತ್ರೆ
ಆಶೆಯ ದೀಪವು ಆರುತ್ತ ಹ್ಯಾಂಗ್ಯಾಂಗೊ
ಉಳದೈತೆ ಅದಕೇ ಹೂಪತ್ರೆ

ಏನೆಲ್ಲ ಹಾಳಾಗ್ಲಿ ಎಲ್ಲಾನು ಅಳಿದೋಗ್ಲಿ
ಆ ದೀಪ ಆರದಾಂಗೆ ಉಳಿದಿರ್ಲಿ
ಆ ಕಣ್ಣ ಬೆಳಕಿನ ದಾರೀನ ಹಿಡಕೊಂಡು
ಉಸಿರಾಟದೀ ಗೊಂಬೆ ಉಸಿರಾಡ್ಲಿ

ಕನಸಿನ ಏಣಿಗೆ ಸಾವಿರಾರು ಹಲ್ಲುಗಳು
ಹಲ್ಳುಗಳುದುರಿದ್ರೂ ಉಳದೈತೆ
ಆಶೆಯ ದೀಪಕ್ಕೆ ಬಿರುಗಾಳಿ ಬೀಸಿದ್ರು
ಆರಿ ಆರಿ ದೀಪ ಬದುಕೈತೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...