Home / ಕವನ / ಕವಿತೆ / ದೀಪ ಆರದಿರಲಿ

ದೀಪ ಆರದಿರಲಿ

ಎಷ್ಟು ದಿನಾದರು ಇಷ್ಟಿಷ್ಟೆ ಆಶೆಗಳು
ನಷ್ಟವಾಗುತಾವೆ ಮನದಾಗೆ
ತೇಲುವ ಕನಸೆಲ್ಲ ಆವ್ಯಾಗಿ ಹೋಗ್ತಾವೆ
ಇಳಿವಲ್ದು ಮಳೆಯಾಗಿ ನೆಲದಾಗೆ

ಕಾಲಕಾಲಕು ನಿನ್ನ ಕರಿತಾನೆ ಬದುಕೀನಿ
ಕರೆಯೋದು ಒಂದೇ ಕೊನೆಯಾಸೆ
ಏನೆಲ್ಲ ಇದ್ರೂನು ಏನೆಲ್ಲ ಬಂದ್ರೂನು
ಕೊರಗೋದು ತಪ್ಪಿಲ್ಲ ಅಳಿಯಾಸೆ

ಅಂದುಕೊಂಡದ್ದಲ್ಲ ಅವಲಕ್ಷಣಾದೀತು
ಆಶೆ ಮಾಡಿದ್ದು ಹುಸಿಯಾತು
ಮಾಡಿದ್ದು ಮುಟ್ಟಿದ್ದು ಎಡವಟ್ಟೆ ಆದೀತು
ಕನಸಿನ ಮಂಟಪ ಕುಸಿದಿತ್ತು

ಆಶೆಯ ಉಸುಗೀನ ಗೂಡನ್ನು ಕಟ್ಟೋದು
ಅಲೆ ಬಂದು ಅದನಾ ಕೆಡಿಸೋದು
ಬಣ್ಣದ ಕನಸಿನ ಕಾಮನ ಬಿಲ್ಲಾಗಿ
ಅಗೋ ಅನ್ನದ್ರಾಗ ಅಳಿಸೋದು

ಕನಸಿನ ಗೋಪುರ ಕಟ್ಟೋದು ಬೀಳೋದು
ನಡೆದಾದ ಬದುಕಿನ ಈ ಯಾತ್ರೆ
ಆಶೆಯ ದೀಪವು ಆರುತ್ತ ಹ್ಯಾಂಗ್ಯಾಂಗೊ
ಉಳದೈತೆ ಅದಕೇ ಹೂಪತ್ರೆ

ಏನೆಲ್ಲ ಹಾಳಾಗ್ಲಿ ಎಲ್ಲಾನು ಅಳಿದೋಗ್ಲಿ
ಆ ದೀಪ ಆರದಾಂಗೆ ಉಳಿದಿರ್ಲಿ
ಆ ಕಣ್ಣ ಬೆಳಕಿನ ದಾರೀನ ಹಿಡಕೊಂಡು
ಉಸಿರಾಟದೀ ಗೊಂಬೆ ಉಸಿರಾಡ್ಲಿ

ಕನಸಿನ ಏಣಿಗೆ ಸಾವಿರಾರು ಹಲ್ಲುಗಳು
ಹಲ್ಳುಗಳುದುರಿದ್ರೂ ಉಳದೈತೆ
ಆಶೆಯ ದೀಪಕ್ಕೆ ಬಿರುಗಾಳಿ ಬೀಸಿದ್ರು
ಆರಿ ಆರಿ ದೀಪ ಬದುಕೈತೆ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...