Home / ಕವನ / ಕವಿತೆ / ದೀಪ ಆರದಿರಲಿ

ದೀಪ ಆರದಿರಲಿ

ಎಷ್ಟು ದಿನಾದರು ಇಷ್ಟಿಷ್ಟೆ ಆಶೆಗಳು
ನಷ್ಟವಾಗುತಾವೆ ಮನದಾಗೆ
ತೇಲುವ ಕನಸೆಲ್ಲ ಆವ್ಯಾಗಿ ಹೋಗ್ತಾವೆ
ಇಳಿವಲ್ದು ಮಳೆಯಾಗಿ ನೆಲದಾಗೆ

ಕಾಲಕಾಲಕು ನಿನ್ನ ಕರಿತಾನೆ ಬದುಕೀನಿ
ಕರೆಯೋದು ಒಂದೇ ಕೊನೆಯಾಸೆ
ಏನೆಲ್ಲ ಇದ್ರೂನು ಏನೆಲ್ಲ ಬಂದ್ರೂನು
ಕೊರಗೋದು ತಪ್ಪಿಲ್ಲ ಅಳಿಯಾಸೆ

ಅಂದುಕೊಂಡದ್ದಲ್ಲ ಅವಲಕ್ಷಣಾದೀತು
ಆಶೆ ಮಾಡಿದ್ದು ಹುಸಿಯಾತು
ಮಾಡಿದ್ದು ಮುಟ್ಟಿದ್ದು ಎಡವಟ್ಟೆ ಆದೀತು
ಕನಸಿನ ಮಂಟಪ ಕುಸಿದಿತ್ತು

ಆಶೆಯ ಉಸುಗೀನ ಗೂಡನ್ನು ಕಟ್ಟೋದು
ಅಲೆ ಬಂದು ಅದನಾ ಕೆಡಿಸೋದು
ಬಣ್ಣದ ಕನಸಿನ ಕಾಮನ ಬಿಲ್ಲಾಗಿ
ಅಗೋ ಅನ್ನದ್ರಾಗ ಅಳಿಸೋದು

ಕನಸಿನ ಗೋಪುರ ಕಟ್ಟೋದು ಬೀಳೋದು
ನಡೆದಾದ ಬದುಕಿನ ಈ ಯಾತ್ರೆ
ಆಶೆಯ ದೀಪವು ಆರುತ್ತ ಹ್ಯಾಂಗ್ಯಾಂಗೊ
ಉಳದೈತೆ ಅದಕೇ ಹೂಪತ್ರೆ

ಏನೆಲ್ಲ ಹಾಳಾಗ್ಲಿ ಎಲ್ಲಾನು ಅಳಿದೋಗ್ಲಿ
ಆ ದೀಪ ಆರದಾಂಗೆ ಉಳಿದಿರ್ಲಿ
ಆ ಕಣ್ಣ ಬೆಳಕಿನ ದಾರೀನ ಹಿಡಕೊಂಡು
ಉಸಿರಾಟದೀ ಗೊಂಬೆ ಉಸಿರಾಡ್ಲಿ

ಕನಸಿನ ಏಣಿಗೆ ಸಾವಿರಾರು ಹಲ್ಲುಗಳು
ಹಲ್ಳುಗಳುದುರಿದ್ರೂ ಉಳದೈತೆ
ಆಶೆಯ ದೀಪಕ್ಕೆ ಬಿರುಗಾಳಿ ಬೀಸಿದ್ರು
ಆರಿ ಆರಿ ದೀಪ ಬದುಕೈತೆ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...