Home / ಕವನ / ಕವಿತೆ / ವೇಸ್ಟ್‌ ಬಾಡೀಸ್

ವೇಸ್ಟ್‌ ಬಾಡೀಸ್

ಇದ್ದರು ಒಂದೇ ಇಲ್ಲದಿದ್ದರು ಒಂದೇ||

ಮುದಿ ತಂದೆ-ತಾಯಿ ಏಳಲು ಬಾರದೆ
ಹಾಸಿಗೆ ಹಿಡಿದು ನರಳಾಡುತಿರಲು
ಬಂದು ನೋಡದೆ ತಂದು ಉಣಿಸದೆ
ದೂರವಾದ ಈ ಮಕ್ಕಳೆಲ್ಲರು || ಇದ್ದರು ||

ಮಕ್ಕಳಿಲ್ಲವೆಂದನೇಕ ದೇವರ
ಹರಕೆ ಹೊತ್ತು ಪಡೆದವರಿಗೆ ಉಣಿಸಿ
ಬೆಳೆಸಿ ದೊಡ್ಡವರ ಮಾಡಿ ಓದಿಸಿ
ಬಾಳಿಗೆ ಮಾರ್ಗವ ಹಿಡಿಸಿ ದುಡಿದವರ
ಕಾಲಲ್ಲಿ ಒದ್ದು ಬಯ್ಯುವ ಸಂತಾನ

ಓದಲು ಕಲಿಸಲು ದಾರಿಯು ತಪ್ಪಿ
ಅಡ್ಡದಾರಿಗಳ ಹಿಡಿದು ಓಡುವ
ಕಳ್ಳರ ಸುಳ್ಳರ ಪುಂಡುತನದಲಿ
ಮನೆಗೂ ಊರಿಗೂ ಭಾರವಾದವರು

ಬದುಕಿನ ಬಂಡಿಯನೆಳೆದೂ ಎಳೆದು
ಕೀಲು ಕೀಲುಗಳು ಕಿರ್‌ರೆನುತಿರಲು
ಮಾಸಿದ ಬಟ್ಟೆಯ ಮಾಸಿದ ಮುಖಗಳ
ಹೇವರಿಸುತ ಕಡೆಗಣ್ಣಲಿ ನೋಡುವವರು

ದೇವರು ಜಾತಿಗಳನ್ನವ ಹಾಕವು
ಜನತೆ ಬದುಕುವುದು ದುಡಿಮೆಯನ್ನದಲಿ
ಕೋಮುವಾದದಲಿ ಜನಗಳ ಛಿದ್ರಿಸಿ
ದೇಶ ದೇಶಗಳ ಬೆಂಕಿ ಹಚ್ಚುವಾ

ದೇಶ ದ್ರೋಹಿಗಳು ಜನರ ದ್ರೋಹಿಗಳು
ಕಣ್ಣಲಿ ಕುಣಿಯುವ ಕನಸುಗಳಾಸೆಗೆ
ಮಣ್ಣಿನ ಸಿರಿಯನು ಕಾಲಲಿ ತುಳಿಯುವ
ಬೇರನು ಮರತೇ ಚಿಗುರು ಹೂಗಳಿಗೆ
ಜೋತಾಡುವ ಈ ಜೋಲ್ಬಾವಲಿಗಳು

ಕಷ್ಟ ನಷ್ಟ ಬಾಳುವೆಯ ದೂರುವ
ಬಾಳ ಸಾಗರದ ಬುರುಗು ಜೀವಿಗಳು
ದುಡಿವ ಕೈಗಳನು ಮರೆತ ದರಿದ್ರರು
ತಗಣಿ ಸೊಳ್ಳೆಗಳು ಕಿಲುಬು ಹುಳುಗಳು

ಬಿಸಿಲಿಗೆ ಬಾಡುವ ಜಳಕ್ಕೆ ಮುರುಟುವ
ಚಳಿಗೆ ಸೆಟೆದು ನಿರ್ಜೀವವಾಗುವ
ಗುಡ್ಡವನೇರದೆ ಕೆಳಕ್ಕೆ ಜಾರುವ
ಮೈಗಳ್ಳರು ಈ ಹೇಡಿ ಜೀವಿಗಳು

ಏಣಿಯ ಸೇರುತ ಮೇಲಕ್ಕೆ ಹತ್ತಿ
ಏಣಿಯ ಕಾಲಲ್ಲಿ ಒದೆಯುವ ಖೂಳರು
ತಿಳಿವಿನ ಹೊಳೆಯಲಿ ಹೊಲಸು ರಾಡಿಯ
ಕಲೆಸಿ ಮಲೆತು ವಿಷ ಬೀಜವಾದವರು
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...