Home / ಕವನ / ಕವಿತೆ / ದ್ವಂದ್ವದಾಟ

ದ್ವಂದ್ವದಾಟ

ತಂಗಾಳಿ ಬೀರಿದೆ, ಬಿರುಗಾಳಿ ಬೀಸಿದೆ
ಜಗವೆಲ್ಲ ನಲಿದಿದೆ, ಅಳುವಿನಲ್ಲಿ ಮುಳುಗಿದೆ
ಗಗನ ಹೊಳೆದಿದೇ, ಮೇಘ ಮುತ್ತಿದೆ
ಮೊಗವೊಂದು ಬಾಡಿದೆ, ಮತ್ತೊಂದು ಅರಳಿದೆ

ಅತ್ತ ಮರಣ-ಇತ್ತ ಜನನ; ಇಳೆಯೊಳೆಲ್ಲೆಡೆ
ಕತ್ತಲಂತೆ ಬೆಳಕಂತೆ ಎರಡು ಕೂಡಿವೆ
ತುತ್ತೊಂದೆಡೆ ಹೊಟ್ಟೆಗಿಲ್ಲ, ಮೃಷ್ಟಾನ್ನವೊಂದೆಡೆ
ಅತ್ತ ಹಾಗೆ, ಇತ್ತ ಹೀಗೆ ಜಗವ ತೂಗಿದೆ

ತಾಮಸರು ನಿಂದಿಹರು, ಸುರಜನರು ಬ೦ದಿಹರು
ಕಿಕ್ಕಿರಿದ ಜಗತುಂಬ ಪುಣ್ಯ ಪಾಪಂತೆ
ಮುಕ್ಕರಿಪ- ಎಚ್ಚರಿಪ ಜನರೆಲ್ಲರಿಲ್ಲಿಹರು
ಇಕ್ಕೆಲದ ಜನವೆಲ್ಲ ಜಗವನ್ನೇ ಜೈಸಿದೆ

ಬ್ರಹ್ಮಚರ್ಯ-ಕಾಮಚರ್ಯ ಎಲ್ಲ ನಡೆದಿವೆ
ಸುತ್ತೆಲ್ಲಾ ರಣಕಹಳೆ, ನಡುವಿದೆ ಶಾಂತಿ ಹೊಳೆ
ಧರ್ಮ-ಕರ್ಮ-ದುಷ್ಕರ್ಮ ಕೂಡಿ ಬಾಳಿವೆ
-ಮಿಥ್ಯ ಎಲ್ಲ ಸೇರಿ ಸಮರಸದ ಜಡಿಮಳೆ

ದೇವಗುಡಿಯೊಂದು, ನಾಸ್ತಿಕ ನುಡಿ ಇನ್ನೊ೦ದು
ಬೇವು-ಬೆಲ್ಲ, ಶಿಗೆ-ಎಣ್ಣೆ, ಅಬ್ಬ ತಾಕಲಾಟವೆ
ನೀವು-ನಾನು, ನೀನು-ನಾವು, ಮೇಲು-ಕೀಳು ಎಂದು
ಅವನು ಹೋಲೆಯನಿವನು ಒಡೆಯ; ಅಳುವೆ-ಬಾಳುವೆ

ಪ್ರಳಯ, ನಾಶ, ದುಃಖ, ನರಕ ಸೊಕ್ಕಿನಿಂದ ನಕ್ಕಿವೆ
ಬೆಳವು, ಉಳಿವು, ಸಿರಿಯು, ಸರ್ಗ ಎಲ್ಲ ಉಕ್ಕಿವೆ
ಏಳು-ಬೀಳು, ದಿಬ್ಬ-ತಗ್ಗು, ಇರುಳು-ಹಗಲು ಸೇರಿವೆ
ಸೆಳೆದು-ಎಳೆದು ಜನವನೆಲ್ಲಾ ಕಾಡಿ-ನೀಡಿ ನೋಡಿವೆ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...