ಸ್ಮಶಾನದಲ್ಲಿ!

ನೋಡಲ್ಲಿ ತಲೆಬುರುಡೆ ನೆಲದ ಮೇಲಲ್ಲಿ !
ಆಗಿಹುದು ಗೋಲ್ ಚಂಡು ಗೊಲ್ಲ ಬಾಲರಿಗೆಲ್ಲ.
ಬೆಳೆದು ಬಾಳಿಹ ಅಸ್ತಿ ಅದೋ ನಾಯ ಬಾಯಲ್ಲಿ !
ಒಲವು ಗೆಲವಿನ ಬಾಳು ಮೂಕವಾಗಿಹುದಲ್ಲ !

ಓ ವೀರ ಕಾಣಿದೋ ಜೀವನಾಂತ್ಯವಿದೆಲ್ಲ !
ಆಗೋ ಆ ಗೋರಿ ಬರಿಯ ಸುಣ್ಣದ ಮಾರಿ !
ನಲಿದ ಜೀವನ ನಾಟ್ಯ ಮೌನವಾಗಿಹುದಲ್ಲ !
ಅಂತಿಮದ ಈ ದಾರಿ ನಮಗೆಲ್ಲ ಕೇರಿ !

ರಣಹದ್ದು ಸ್ವಾನಗಳ ಘೋರರವವು ;
ಹರಿದು ತಿನ್ನಲೋ ರಕ್ತ ಮಾಂಸವನ್ನು ?
ರೌದ್ರ ಜೀವನಧರ್ಮದಿದೋ ಮರ್ಮವು
ಕಣ್ಣು ತಿಳಿಮಾಡಿ ಕಾಣಿಲ್ಲಿ ಮಾಯ ಬಗೆಯನ್ನು

ಏರಬೇಕೆಲ್ಲರೀ ಕೊನೆಯ ತೇರನ್ನು
ಹಿರಿಯ ಕಿರಿಯರೆಲ್ಲರ ಬೀಡು ಈ ಮಣ್ಣ ಗೂಡು !
ಸಿರಿತನದ ಲಾಸ್ಯ ಲಾವಣ್ಯ ಕಲ್ಯಾಣದಿರವನ್ನು
ಕರೆದಿಹುದು ಮಳೆಗಾಳಿ ಚಳಿಯ ಈ ನಾಡು

ಮಾಯಜಾಲದ ಸವಿಗೆ ಮುತ್ತನಿತ್ತಿಹ ಧೀರ !
ಬಾ ಇಲ್ಲಿ ಅರಘಳಿಗೆ; ನಿನ್ನ ಜೀವನ ಸೂಡು !
ಹರುಷದಾ ಬದುಕು ಈ ಮಣ್ಣ ಶೃಂಗಾರ !
ಬಾಳ ಬಾನಿನ ಬಯಕೆಯಲ್ಲಿ ತೋಡಿ ನೋಡು !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುತೂಹಲ
Next post ಚುಟುಕಗಳೇ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮೇಷ್ಟ್ರು ರಂಗಪ್ಪ

    ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…