ಸ್ಮಶಾನದಲ್ಲಿ!

ನೋಡಲ್ಲಿ ತಲೆಬುರುಡೆ ನೆಲದ ಮೇಲಲ್ಲಿ !
ಆಗಿಹುದು ಗೋಲ್ ಚಂಡು ಗೊಲ್ಲ ಬಾಲರಿಗೆಲ್ಲ.
ಬೆಳೆದು ಬಾಳಿಹ ಅಸ್ತಿ ಅದೋ ನಾಯ ಬಾಯಲ್ಲಿ !
ಒಲವು ಗೆಲವಿನ ಬಾಳು ಮೂಕವಾಗಿಹುದಲ್ಲ !

ಓ ವೀರ ಕಾಣಿದೋ ಜೀವನಾಂತ್ಯವಿದೆಲ್ಲ !
ಆಗೋ ಆ ಗೋರಿ ಬರಿಯ ಸುಣ್ಣದ ಮಾರಿ !
ನಲಿದ ಜೀವನ ನಾಟ್ಯ ಮೌನವಾಗಿಹುದಲ್ಲ !
ಅಂತಿಮದ ಈ ದಾರಿ ನಮಗೆಲ್ಲ ಕೇರಿ !

ರಣಹದ್ದು ಸ್ವಾನಗಳ ಘೋರರವವು ;
ಹರಿದು ತಿನ್ನಲೋ ರಕ್ತ ಮಾಂಸವನ್ನು ?
ರೌದ್ರ ಜೀವನಧರ್ಮದಿದೋ ಮರ್ಮವು
ಕಣ್ಣು ತಿಳಿಮಾಡಿ ಕಾಣಿಲ್ಲಿ ಮಾಯ ಬಗೆಯನ್ನು

ಏರಬೇಕೆಲ್ಲರೀ ಕೊನೆಯ ತೇರನ್ನು
ಹಿರಿಯ ಕಿರಿಯರೆಲ್ಲರ ಬೀಡು ಈ ಮಣ್ಣ ಗೂಡು !
ಸಿರಿತನದ ಲಾಸ್ಯ ಲಾವಣ್ಯ ಕಲ್ಯಾಣದಿರವನ್ನು
ಕರೆದಿಹುದು ಮಳೆಗಾಳಿ ಚಳಿಯ ಈ ನಾಡು

ಮಾಯಜಾಲದ ಸವಿಗೆ ಮುತ್ತನಿತ್ತಿಹ ಧೀರ !
ಬಾ ಇಲ್ಲಿ ಅರಘಳಿಗೆ; ನಿನ್ನ ಜೀವನ ಸೂಡು !
ಹರುಷದಾ ಬದುಕು ಈ ಮಣ್ಣ ಶೃಂಗಾರ !
ಬಾಳ ಬಾನಿನ ಬಯಕೆಯಲ್ಲಿ ತೋಡಿ ನೋಡು !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುತೂಹಲ
Next post ಚುಟುಕಗಳೇ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…