Home / ಕವನ / ಕವಿತೆ / ಗುರುಸಿದ್ಧರಾಜಯೋಗೀಂದ್ರರ ಲಿಂಗೈಕ್ಯ

ಗುರುಸಿದ್ಧರಾಜಯೋಗೀಂದ್ರರ ಲಿಂಗೈಕ್ಯ

ಅಳುವಿರೇಕೆ ನೀವು, ಬಿಸಿಯುಸಿರು ನಿಮಗೇಕೆ?
ಕಣ್ಣೀರು ಸುರಿಸುವಿರಿ, ಎದೆತುಂಬಿ ಕುಸಿಯುವಿರಿ
ಕಣ್ಣು ಕೆಂಪಾಗಿಹುದಲ್ಲ! ಇನ್ನಳವು ಏಕೆ ?
ಅತ್ತು ಬಿಗಿದಿವೆ ಕ೦ಠ, ಮರೆಯಿರಿದೋ ದುಃಖದುರಿ

ನಿಮ್ಮಳವು ನನಗಿರದೇ ? ಸಾವು ನಮ್ಮೆಲ್ಲರದು
ಮಣ್ಣು ಕೊಟ್ಟಿಹ ದೇಹ ಮಣ್ಣಿಗರ್ಪಿತವಹುದು
ಮಣ್ಣಿಗೆ ಮರೆತು ಅನ್ನುವೆವು ‘ನಾವು’ ಎಂದು
ದೇಹ ನಾವಲ್ಲ; ಮಣ್ಣಹುದು, ಮಣ್ಣು ಮಣ್ಣಿಗಾಗಿಹುದು

ನೀವು ಗಳಿಸಿದ ದೀಪ ಮೂರುಸಾವಿರ ದೀಪ
ಆ ದೀಪ ಕಿರಿಯಹುದೇ? ಕೊನೆಯಹುದೇ? ಹೇಳಿ
ಆರದಾ ದೀಪ ಗುರುಸಿದ್ಧ ನಂದಾದೀಪ
ಗುರುಸಿದ್ಧದೇವರಳಿದಿಲ್ಲ; ಅಳಿದುದವರ ದೇಹ ಕೇಳಿ

ಗಂಗಾಧರ ವಾಣಿಜ್ಯ ವಿದ್ಯಾಲಯದ ವಾಣಿಯವರು
ಶಾರದೆಯ ವೀಣೆಯದೋ ನುಡಿಸಿತವರ ಕೃಪಾ ಸುಧೆ
ಕಾಡಸಿದ್ಧೇಶ್ವರನ ಗುರುಸಿದ್ಧನಾಶ್ರಯಿಸಿಹನು
ಅತನು ಬೆಳೆಯುತೆ; ಆಶ್ರಯದಾತನಳಿಯಬಹುದೇ?

ಕಿರಿಯರಿಗೆ ಹಿರಿಯರಿಗೆ ನೀಡಿತವರ ಕಾಮಧೇನು ಕರವು
ವಿದ್ಯೆಯನು, ಬುದ್ಧಿಯನು, ಪುಣ್ಯವನ್ನು ಧರೆಯೊಳು
ನಾವುಂಡ ಅಂಮೃತದಲಿ ಅವರಾತ್ಮ ಕಾಣುವೆವು
ಅವರ ತತ್ವ ಕಳೆ ಏರಿ ಬೆಳೆಯುತ್ತಿದೆ ಭುವಿಯೊಳು

ಶಿವಯೋಗ ದಿನದಂದು ಗುರುಸಿದ್ಧ ಶಿವಯೋಗಿ
ಶಿವನೊಳೊಂದಾಗಿ ಗಂಗಾಧರ ಶಿವಯೋಗಿ ರೂಪತಾಳಿದರು
ಮೂರುಸಾವಿರ ಮಠದ ಸರ್ವಭಕ್ತರಿಗೆ ಆಶೀರ್ವದಿಸಿ
ರಾಜೇಂದ್ರಯೋಗಿಯದೋ ನಿಜಸಾಕ್ಷಾತ್ಕಾರ ತೋರುತಿಹರು
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...