Home / ಕವನ / ಕವಿತೆ / ಗುರುಸಿದ್ಧರಾಜಯೋಗೀಂದ್ರರ ಲಿಂಗೈಕ್ಯ

ಗುರುಸಿದ್ಧರಾಜಯೋಗೀಂದ್ರರ ಲಿಂಗೈಕ್ಯ

ಅಳುವಿರೇಕೆ ನೀವು, ಬಿಸಿಯುಸಿರು ನಿಮಗೇಕೆ?
ಕಣ್ಣೀರು ಸುರಿಸುವಿರಿ, ಎದೆತುಂಬಿ ಕುಸಿಯುವಿರಿ
ಕಣ್ಣು ಕೆಂಪಾಗಿಹುದಲ್ಲ! ಇನ್ನಳವು ಏಕೆ ?
ಅತ್ತು ಬಿಗಿದಿವೆ ಕ೦ಠ, ಮರೆಯಿರಿದೋ ದುಃಖದುರಿ

ನಿಮ್ಮಳವು ನನಗಿರದೇ ? ಸಾವು ನಮ್ಮೆಲ್ಲರದು
ಮಣ್ಣು ಕೊಟ್ಟಿಹ ದೇಹ ಮಣ್ಣಿಗರ್ಪಿತವಹುದು
ಮಣ್ಣಿಗೆ ಮರೆತು ಅನ್ನುವೆವು ‘ನಾವು’ ಎಂದು
ದೇಹ ನಾವಲ್ಲ; ಮಣ್ಣಹುದು, ಮಣ್ಣು ಮಣ್ಣಿಗಾಗಿಹುದು

ನೀವು ಗಳಿಸಿದ ದೀಪ ಮೂರುಸಾವಿರ ದೀಪ
ಆ ದೀಪ ಕಿರಿಯಹುದೇ? ಕೊನೆಯಹುದೇ? ಹೇಳಿ
ಆರದಾ ದೀಪ ಗುರುಸಿದ್ಧ ನಂದಾದೀಪ
ಗುರುಸಿದ್ಧದೇವರಳಿದಿಲ್ಲ; ಅಳಿದುದವರ ದೇಹ ಕೇಳಿ

ಗಂಗಾಧರ ವಾಣಿಜ್ಯ ವಿದ್ಯಾಲಯದ ವಾಣಿಯವರು
ಶಾರದೆಯ ವೀಣೆಯದೋ ನುಡಿಸಿತವರ ಕೃಪಾ ಸುಧೆ
ಕಾಡಸಿದ್ಧೇಶ್ವರನ ಗುರುಸಿದ್ಧನಾಶ್ರಯಿಸಿಹನು
ಅತನು ಬೆಳೆಯುತೆ; ಆಶ್ರಯದಾತನಳಿಯಬಹುದೇ?

ಕಿರಿಯರಿಗೆ ಹಿರಿಯರಿಗೆ ನೀಡಿತವರ ಕಾಮಧೇನು ಕರವು
ವಿದ್ಯೆಯನು, ಬುದ್ಧಿಯನು, ಪುಣ್ಯವನ್ನು ಧರೆಯೊಳು
ನಾವುಂಡ ಅಂಮೃತದಲಿ ಅವರಾತ್ಮ ಕಾಣುವೆವು
ಅವರ ತತ್ವ ಕಳೆ ಏರಿ ಬೆಳೆಯುತ್ತಿದೆ ಭುವಿಯೊಳು

ಶಿವಯೋಗ ದಿನದಂದು ಗುರುಸಿದ್ಧ ಶಿವಯೋಗಿ
ಶಿವನೊಳೊಂದಾಗಿ ಗಂಗಾಧರ ಶಿವಯೋಗಿ ರೂಪತಾಳಿದರು
ಮೂರುಸಾವಿರ ಮಠದ ಸರ್ವಭಕ್ತರಿಗೆ ಆಶೀರ್ವದಿಸಿ
ರಾಜೇಂದ್ರಯೋಗಿಯದೋ ನಿಜಸಾಕ್ಷಾತ್ಕಾರ ತೋರುತಿಹರು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...