Home / ಕವನ / ಕವಿತೆ / ತಗಣಿಗಳೊಡನೆ ಮಹಾಯುದ್ಧ

ತಗಣಿಗಳೊಡನೆ ಮಹಾಯುದ್ಧ

ವೀರರೆಂಬವರಾರು ? ಶೂರರಿರುವವರಾರು ?
ಬನ್ನಿರೋ ಬಹು ಬೇಗ, ತನ್ನಿರೋ ನಿಮ್ಮ ಮಹಾಬಲವ
ಬಂದಿಹುದು ಮಹಾಯುದ್ಧದ ಮಹಾ ಉಸಿರು
ನೋಡ ನಿಂತಿಹರು ಸುರಗಣವೂ ನಿಮ್ಮ ರಣ ಛಲವ

ಮನೆ ಮನೆಗೂ ಮನ ಮನಗೂ ಹಾಹಾಕಾರ
ತಡೆಯದೇ ಬಿಡದೇಳಿ, ನಿಮ್ಮೆಲ್ಲ ಶೌರ್ಯ ತಾಳಿ
ಹೊಸೆದು ಹುರಿಮಾಡಿ ನಿಮ್ಮ ಮೀಸೆಯಾಕಾರ
ಖಡ್ಗ ಖಠಾರಿ ಢಾಲುಗಳೊಡನೆ ಮುಗಿಬೀಳಿ

ಸೊಡ್ಡು ಹೊಡೆಯಿರಿ ನೀವು ಕಾಳಗದ ಇದಿರು
ಮಿಂಚುವಾ ಖಡ್ಗದೊಡನೆ ಮಿಂಚು ನೀವಾಗಿ
ನಿಮ್ಮ ವೈರಿಗಳದೋ ಅಲ್ಲಿ ಅಡಗಿ ನಿಂತಿಹರು
ಕಾದಿಹರು ಕಾಳಗಕೆ; ಇರಿದು ಕೊಲ್ಲಿರಿ ರೇಗಿ

ಬಲುಜೋಕೆ; ಸಿಗರವರು ಬಹು ಬೇಗ
ಕಡಿದಾರು, ರಕ್ತ ಕುಡಿದಾರು! ಬಿಡಬೇಡಿರವರ
ನಿಲುವಿಗೆ ಕಿರಿದಾದರೂ ನಿಲುಕದಾ ವೇಗ
ಮೈಮರೆಯದೇ ಮುನ್ನುಗ್ಗಿ; ಹಿಡಿಯಲವರ

ಹಗಲು ದಾಳಿಗರಲ್ಲ; ರಾತ್ರಿವೀರರವರು
ನಿದ್ರಿಸದಿರಿ, ನುಸುಳಿ ಬಂದಾರು; ಬಿಡದೆ ಕಾಡ್ಯಾರು
ನಿಮ್ಮ ಮೇಲೇರಿ ಬರಬಹುದು ಅವರು
ಆಯಾಸ ಆಲಸ್ಯ ಆತುರವ ತಡೆಯಿರಿ ನೀವೆಲ್ಲರು

ಮನೆ ಮನೆಯ ನುಗ್ಯಾರು; ಬೀಡಾರ ಹಾಕ್ಯಾರು
ಗುಡಿಲು ಗುಂಡಾರ ಏನು; ಅರಮನೆ ಏನು
ಎಲ್ಲೆಡೆಗು ಹೊಕ್ಕಾರು; ಸುತ್ತೆಲ್ಲ ಮುತ್ಯಾರು
ಲೆಕ್ಕಿಸದೆ ಜನರ ನೋವು ದಣಿವುಗಳನು

ರಕ್ತ ಹೀರಿ ಕೆಂಪೇರಿದ ಜೀರಿಗೆ ಮುಖದವರು
ಏನವರ ಒನಪು ಒಯಾರ; ಸುತ್ತೆಲ್ಲ ಜೈಸ್ಯಾರ
ವಿಷಮದ್ದಿಗೂ ಸೋಲದ ರಿಪು ತಂಡದವರು
ಇವರ ಸಂಹಾರವರಿಯದ ನಮಗೆಲ್ಲ ಧಿಕ್ಕಾರ !
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...