Home / ಕವನ / ಕವಿತೆ / ತಗಣಿಗಳೊಡನೆ ಮಹಾಯುದ್ಧ

ತಗಣಿಗಳೊಡನೆ ಮಹಾಯುದ್ಧ

ವೀರರೆಂಬವರಾರು ? ಶೂರರಿರುವವರಾರು ?
ಬನ್ನಿರೋ ಬಹು ಬೇಗ, ತನ್ನಿರೋ ನಿಮ್ಮ ಮಹಾಬಲವ
ಬಂದಿಹುದು ಮಹಾಯುದ್ಧದ ಮಹಾ ಉಸಿರು
ನೋಡ ನಿಂತಿಹರು ಸುರಗಣವೂ ನಿಮ್ಮ ರಣ ಛಲವ

ಮನೆ ಮನೆಗೂ ಮನ ಮನಗೂ ಹಾಹಾಕಾರ
ತಡೆಯದೇ ಬಿಡದೇಳಿ, ನಿಮ್ಮೆಲ್ಲ ಶೌರ್ಯ ತಾಳಿ
ಹೊಸೆದು ಹುರಿಮಾಡಿ ನಿಮ್ಮ ಮೀಸೆಯಾಕಾರ
ಖಡ್ಗ ಖಠಾರಿ ಢಾಲುಗಳೊಡನೆ ಮುಗಿಬೀಳಿ

ಸೊಡ್ಡು ಹೊಡೆಯಿರಿ ನೀವು ಕಾಳಗದ ಇದಿರು
ಮಿಂಚುವಾ ಖಡ್ಗದೊಡನೆ ಮಿಂಚು ನೀವಾಗಿ
ನಿಮ್ಮ ವೈರಿಗಳದೋ ಅಲ್ಲಿ ಅಡಗಿ ನಿಂತಿಹರು
ಕಾದಿಹರು ಕಾಳಗಕೆ; ಇರಿದು ಕೊಲ್ಲಿರಿ ರೇಗಿ

ಬಲುಜೋಕೆ; ಸಿಗರವರು ಬಹು ಬೇಗ
ಕಡಿದಾರು, ರಕ್ತ ಕುಡಿದಾರು! ಬಿಡಬೇಡಿರವರ
ನಿಲುವಿಗೆ ಕಿರಿದಾದರೂ ನಿಲುಕದಾ ವೇಗ
ಮೈಮರೆಯದೇ ಮುನ್ನುಗ್ಗಿ; ಹಿಡಿಯಲವರ

ಹಗಲು ದಾಳಿಗರಲ್ಲ; ರಾತ್ರಿವೀರರವರು
ನಿದ್ರಿಸದಿರಿ, ನುಸುಳಿ ಬಂದಾರು; ಬಿಡದೆ ಕಾಡ್ಯಾರು
ನಿಮ್ಮ ಮೇಲೇರಿ ಬರಬಹುದು ಅವರು
ಆಯಾಸ ಆಲಸ್ಯ ಆತುರವ ತಡೆಯಿರಿ ನೀವೆಲ್ಲರು

ಮನೆ ಮನೆಯ ನುಗ್ಯಾರು; ಬೀಡಾರ ಹಾಕ್ಯಾರು
ಗುಡಿಲು ಗುಂಡಾರ ಏನು; ಅರಮನೆ ಏನು
ಎಲ್ಲೆಡೆಗು ಹೊಕ್ಕಾರು; ಸುತ್ತೆಲ್ಲ ಮುತ್ಯಾರು
ಲೆಕ್ಕಿಸದೆ ಜನರ ನೋವು ದಣಿವುಗಳನು

ರಕ್ತ ಹೀರಿ ಕೆಂಪೇರಿದ ಜೀರಿಗೆ ಮುಖದವರು
ಏನವರ ಒನಪು ಒಯಾರ; ಸುತ್ತೆಲ್ಲ ಜೈಸ್ಯಾರ
ವಿಷಮದ್ದಿಗೂ ಸೋಲದ ರಿಪು ತಂಡದವರು
ಇವರ ಸಂಹಾರವರಿಯದ ನಮಗೆಲ್ಲ ಧಿಕ್ಕಾರ !
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...