Home / ಕವನ / ಕವಿತೆ / ತಗಣಿಗಳೊಡನೆ ಮಹಾಯುದ್ಧ

ತಗಣಿಗಳೊಡನೆ ಮಹಾಯುದ್ಧ

ವೀರರೆಂಬವರಾರು ? ಶೂರರಿರುವವರಾರು ?
ಬನ್ನಿರೋ ಬಹು ಬೇಗ, ತನ್ನಿರೋ ನಿಮ್ಮ ಮಹಾಬಲವ
ಬಂದಿಹುದು ಮಹಾಯುದ್ಧದ ಮಹಾ ಉಸಿರು
ನೋಡ ನಿಂತಿಹರು ಸುರಗಣವೂ ನಿಮ್ಮ ರಣ ಛಲವ

ಮನೆ ಮನೆಗೂ ಮನ ಮನಗೂ ಹಾಹಾಕಾರ
ತಡೆಯದೇ ಬಿಡದೇಳಿ, ನಿಮ್ಮೆಲ್ಲ ಶೌರ್ಯ ತಾಳಿ
ಹೊಸೆದು ಹುರಿಮಾಡಿ ನಿಮ್ಮ ಮೀಸೆಯಾಕಾರ
ಖಡ್ಗ ಖಠಾರಿ ಢಾಲುಗಳೊಡನೆ ಮುಗಿಬೀಳಿ

ಸೊಡ್ಡು ಹೊಡೆಯಿರಿ ನೀವು ಕಾಳಗದ ಇದಿರು
ಮಿಂಚುವಾ ಖಡ್ಗದೊಡನೆ ಮಿಂಚು ನೀವಾಗಿ
ನಿಮ್ಮ ವೈರಿಗಳದೋ ಅಲ್ಲಿ ಅಡಗಿ ನಿಂತಿಹರು
ಕಾದಿಹರು ಕಾಳಗಕೆ; ಇರಿದು ಕೊಲ್ಲಿರಿ ರೇಗಿ

ಬಲುಜೋಕೆ; ಸಿಗರವರು ಬಹು ಬೇಗ
ಕಡಿದಾರು, ರಕ್ತ ಕುಡಿದಾರು! ಬಿಡಬೇಡಿರವರ
ನಿಲುವಿಗೆ ಕಿರಿದಾದರೂ ನಿಲುಕದಾ ವೇಗ
ಮೈಮರೆಯದೇ ಮುನ್ನುಗ್ಗಿ; ಹಿಡಿಯಲವರ

ಹಗಲು ದಾಳಿಗರಲ್ಲ; ರಾತ್ರಿವೀರರವರು
ನಿದ್ರಿಸದಿರಿ, ನುಸುಳಿ ಬಂದಾರು; ಬಿಡದೆ ಕಾಡ್ಯಾರು
ನಿಮ್ಮ ಮೇಲೇರಿ ಬರಬಹುದು ಅವರು
ಆಯಾಸ ಆಲಸ್ಯ ಆತುರವ ತಡೆಯಿರಿ ನೀವೆಲ್ಲರು

ಮನೆ ಮನೆಯ ನುಗ್ಯಾರು; ಬೀಡಾರ ಹಾಕ್ಯಾರು
ಗುಡಿಲು ಗುಂಡಾರ ಏನು; ಅರಮನೆ ಏನು
ಎಲ್ಲೆಡೆಗು ಹೊಕ್ಕಾರು; ಸುತ್ತೆಲ್ಲ ಮುತ್ಯಾರು
ಲೆಕ್ಕಿಸದೆ ಜನರ ನೋವು ದಣಿವುಗಳನು

ರಕ್ತ ಹೀರಿ ಕೆಂಪೇರಿದ ಜೀರಿಗೆ ಮುಖದವರು
ಏನವರ ಒನಪು ಒಯಾರ; ಸುತ್ತೆಲ್ಲ ಜೈಸ್ಯಾರ
ವಿಷಮದ್ದಿಗೂ ಸೋಲದ ರಿಪು ತಂಡದವರು
ಇವರ ಸಂಹಾರವರಿಯದ ನಮಗೆಲ್ಲ ಧಿಕ್ಕಾರ !
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...