Home / ಕವನ / ಕವಿತೆ / ಆಧುನಿಕತೆ

ಆಧುನಿಕತೆ

ನನ್ನಪ್ಪ ದುಡಿಮೆಗಾರ
ಹೆಣಗಾಡಿ ಕೊಂಡ ಗದ್ದೆಗಳ
ಮತ್ತೆ ಹದಮಾಡಿ ಹಸನುಗೈದ
ಅಸಲಿಗೆ ಈಗ ಅಲ್ಲಿ
ಗದ್ದೆಗಳೇ ಇಲ್ಲ
ಬದಲಿಗೆ ತೋಟಗಳು ತಲೆ ಎತ್ತಿದೆ
ತೆಂಗು ಕಂಗು ವಾಣಿಜ್ಯ ಬೆಳೆಗಳು

ನನ್ನಣ್ಣನ ಜೊತೆಗೂಡಿ
ಎತ್ತರ ಜಿಗಿವಾಡುತ್ತಿದ್ದ
ಗದ್ದೆ ಹಾಳಿಗಳು
ಈಗ ಮಂಗಮಾಯ
ಗಿಡಗಳಿಗೆ ಬುಡಗಳಾಗಿ
ಅಪ್ಪ ಗದ್ದೆಯ ಬದುವಿಗೆ
ಅಂದು ಕಟ್ಟಿಸಿದ ಕಲ್ಲು ಮಣ್ಣಿನ
ಪಾಗಾರು ಇಂದಿಲ್ಲ – ಅಲ್ಲಿ
ಕಾಂಕ್ರೀಟು ಕಂಪೌಂಡು
ರೆಡಿಯಾಗಿದೆ

ನೀರು ಹಾಯಿಸಲು
ತೋಡಿದ ಬೆಲಗುಗಳು
ಅದೃಶ್ಯ-ಪರ್ಯಾಯಕ್ಕೆ
ಪ್ಲಾಸ್ಟಿಕ್ಕು ಪೈಪುಗಳು
ಮಣ್ಣಲ್ಲಿಯೇ ಅಡಗಿ
ಗಿಡಗಳಿಗೆ ಡ್ರಿಪ್ ಇರಿಗೇಷನ್‌ಸ್ಪ್ರಿಂಕಲರು

ನಮ್ಮ ಮನೆಯ ಕೊಟ್ಟಿಗೆಯಲ್ಲಿ
‘ಅಂಬಾ’ ದನಿ ನಿನದಿಸುತ್ತಿಲ್ಲ
ಮನೆ ಹಾಲ ರುಚಿ ಹೋಗಿ
ಬದಲಿಗೆ ಕಲಬೆರಕೆಯ
ಹಾಲಿನ ಪಾಕೀಟು
ಮನೆಬಾಗಿಲಿಗೆ ಬೆಳ್ಳಂಬೆಳಗ್ಗೆ

ನನ್ನಮ್ಮ ಎರಡು ರಟ್ಟೆ
ಬಳಸಿ ಮಸಾಲೆ ಅರೆಯುತ್ತಿದ್ದ
ರುಬ್ಬು ಕಲ್ಲು ಈಗಿಲ್ಲ
ಆ ಜಾಗದಲ್ಲಿ ರಾರಾಜಿಸುತ್ತಿದೆ
ಮಿಕ್ಸರು, ಗ್ರ್‍ಯಾಂಡರು

ನಮ್ಮ ಮನೆಯಲ್ಲೀಗ ವರ್ಷಾ ಒಂದಾವರ್ತಿ
ಮನೆ ಮುಂದಿನಂಗಳ ಹಸನು ಮಾಡಬೇಕಿಲ್ಲ
ಅದಕ್ಕೆ ಅಮ್ಮನ ಒರೆಗ ಕಲ್ಲುಗಳು
ಅಟ್ಟಕ್ಕೇರಿದೆ ಬಾಳಿಲ್ಲದೆ
ಹೊರತಿಗೆ, ಸಿಮೆಂಟು ನೆಲ
ಸಿರಿವಂತಿಗೆ ಸಾರುತ್ತಿದೆ

ಅಮ್ಮ ಅಂದು ಸೌದೆ ಅಟ್ಟಿ
ಅಡುಗೆ ಬೇಯಿಸುತ್ತಿದ್ದ ಮಣ್ಣಿನ
ಒಲೆಗಳು ಈಗಿಲ್ಲ
ಆ ಜಾಗದಲ್ಲಿ ಕಲ್ಲಿನ ಕಟ್ಟೆ
ಎದ್ದು ಗ್ಯಾಸ ಒಲೆ
ಸ್ಥಾಪನೆಯಾಗಿದೆ

ನಮ್ಮ ಮನೆಯಲ್ಲೀಗ
ಆಡಂಬರವಿದೆ, ಆದರೆ
ಹಿಂದಿನ ಆನಂದವಿಲ್ಲ
ಒಡಹುಟ್ಟಿದವರ ಸಂಬಂಧವಿದೆ
ಹಿಂದಿನ ಅನುಬಂಧವಿಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...