Home / ಕವನ / ಕವಿತೆ / ಆಧುನಿಕತೆ

ಆಧುನಿಕತೆ

ನನ್ನಪ್ಪ ದುಡಿಮೆಗಾರ
ಹೆಣಗಾಡಿ ಕೊಂಡ ಗದ್ದೆಗಳ
ಮತ್ತೆ ಹದಮಾಡಿ ಹಸನುಗೈದ
ಅಸಲಿಗೆ ಈಗ ಅಲ್ಲಿ
ಗದ್ದೆಗಳೇ ಇಲ್ಲ
ಬದಲಿಗೆ ತೋಟಗಳು ತಲೆ ಎತ್ತಿದೆ
ತೆಂಗು ಕಂಗು ವಾಣಿಜ್ಯ ಬೆಳೆಗಳು

ನನ್ನಣ್ಣನ ಜೊತೆಗೂಡಿ
ಎತ್ತರ ಜಿಗಿವಾಡುತ್ತಿದ್ದ
ಗದ್ದೆ ಹಾಳಿಗಳು
ಈಗ ಮಂಗಮಾಯ
ಗಿಡಗಳಿಗೆ ಬುಡಗಳಾಗಿ
ಅಪ್ಪ ಗದ್ದೆಯ ಬದುವಿಗೆ
ಅಂದು ಕಟ್ಟಿಸಿದ ಕಲ್ಲು ಮಣ್ಣಿನ
ಪಾಗಾರು ಇಂದಿಲ್ಲ – ಅಲ್ಲಿ
ಕಾಂಕ್ರೀಟು ಕಂಪೌಂಡು
ರೆಡಿಯಾಗಿದೆ

ನೀರು ಹಾಯಿಸಲು
ತೋಡಿದ ಬೆಲಗುಗಳು
ಅದೃಶ್ಯ-ಪರ್ಯಾಯಕ್ಕೆ
ಪ್ಲಾಸ್ಟಿಕ್ಕು ಪೈಪುಗಳು
ಮಣ್ಣಲ್ಲಿಯೇ ಅಡಗಿ
ಗಿಡಗಳಿಗೆ ಡ್ರಿಪ್ ಇರಿಗೇಷನ್‌ಸ್ಪ್ರಿಂಕಲರು

ನಮ್ಮ ಮನೆಯ ಕೊಟ್ಟಿಗೆಯಲ್ಲಿ
‘ಅಂಬಾ’ ದನಿ ನಿನದಿಸುತ್ತಿಲ್ಲ
ಮನೆ ಹಾಲ ರುಚಿ ಹೋಗಿ
ಬದಲಿಗೆ ಕಲಬೆರಕೆಯ
ಹಾಲಿನ ಪಾಕೀಟು
ಮನೆಬಾಗಿಲಿಗೆ ಬೆಳ್ಳಂಬೆಳಗ್ಗೆ

ನನ್ನಮ್ಮ ಎರಡು ರಟ್ಟೆ
ಬಳಸಿ ಮಸಾಲೆ ಅರೆಯುತ್ತಿದ್ದ
ರುಬ್ಬು ಕಲ್ಲು ಈಗಿಲ್ಲ
ಆ ಜಾಗದಲ್ಲಿ ರಾರಾಜಿಸುತ್ತಿದೆ
ಮಿಕ್ಸರು, ಗ್ರ್‍ಯಾಂಡರು

ನಮ್ಮ ಮನೆಯಲ್ಲೀಗ ವರ್ಷಾ ಒಂದಾವರ್ತಿ
ಮನೆ ಮುಂದಿನಂಗಳ ಹಸನು ಮಾಡಬೇಕಿಲ್ಲ
ಅದಕ್ಕೆ ಅಮ್ಮನ ಒರೆಗ ಕಲ್ಲುಗಳು
ಅಟ್ಟಕ್ಕೇರಿದೆ ಬಾಳಿಲ್ಲದೆ
ಹೊರತಿಗೆ, ಸಿಮೆಂಟು ನೆಲ
ಸಿರಿವಂತಿಗೆ ಸಾರುತ್ತಿದೆ

ಅಮ್ಮ ಅಂದು ಸೌದೆ ಅಟ್ಟಿ
ಅಡುಗೆ ಬೇಯಿಸುತ್ತಿದ್ದ ಮಣ್ಣಿನ
ಒಲೆಗಳು ಈಗಿಲ್ಲ
ಆ ಜಾಗದಲ್ಲಿ ಕಲ್ಲಿನ ಕಟ್ಟೆ
ಎದ್ದು ಗ್ಯಾಸ ಒಲೆ
ಸ್ಥಾಪನೆಯಾಗಿದೆ

ನಮ್ಮ ಮನೆಯಲ್ಲೀಗ
ಆಡಂಬರವಿದೆ, ಆದರೆ
ಹಿಂದಿನ ಆನಂದವಿಲ್ಲ
ಒಡಹುಟ್ಟಿದವರ ಸಂಬಂಧವಿದೆ
ಹಿಂದಿನ ಅನುಬಂಧವಿಲ್ಲ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...