Home / ಕವನ / ಕವಿತೆ / ಆಧುನಿಕತೆ

ಆಧುನಿಕತೆ

ನನ್ನಪ್ಪ ದುಡಿಮೆಗಾರ
ಹೆಣಗಾಡಿ ಕೊಂಡ ಗದ್ದೆಗಳ
ಮತ್ತೆ ಹದಮಾಡಿ ಹಸನುಗೈದ
ಅಸಲಿಗೆ ಈಗ ಅಲ್ಲಿ
ಗದ್ದೆಗಳೇ ಇಲ್ಲ
ಬದಲಿಗೆ ತೋಟಗಳು ತಲೆ ಎತ್ತಿದೆ
ತೆಂಗು ಕಂಗು ವಾಣಿಜ್ಯ ಬೆಳೆಗಳು

ನನ್ನಣ್ಣನ ಜೊತೆಗೂಡಿ
ಎತ್ತರ ಜಿಗಿವಾಡುತ್ತಿದ್ದ
ಗದ್ದೆ ಹಾಳಿಗಳು
ಈಗ ಮಂಗಮಾಯ
ಗಿಡಗಳಿಗೆ ಬುಡಗಳಾಗಿ
ಅಪ್ಪ ಗದ್ದೆಯ ಬದುವಿಗೆ
ಅಂದು ಕಟ್ಟಿಸಿದ ಕಲ್ಲು ಮಣ್ಣಿನ
ಪಾಗಾರು ಇಂದಿಲ್ಲ – ಅಲ್ಲಿ
ಕಾಂಕ್ರೀಟು ಕಂಪೌಂಡು
ರೆಡಿಯಾಗಿದೆ

ನೀರು ಹಾಯಿಸಲು
ತೋಡಿದ ಬೆಲಗುಗಳು
ಅದೃಶ್ಯ-ಪರ್ಯಾಯಕ್ಕೆ
ಪ್ಲಾಸ್ಟಿಕ್ಕು ಪೈಪುಗಳು
ಮಣ್ಣಲ್ಲಿಯೇ ಅಡಗಿ
ಗಿಡಗಳಿಗೆ ಡ್ರಿಪ್ ಇರಿಗೇಷನ್‌ಸ್ಪ್ರಿಂಕಲರು

ನಮ್ಮ ಮನೆಯ ಕೊಟ್ಟಿಗೆಯಲ್ಲಿ
‘ಅಂಬಾ’ ದನಿ ನಿನದಿಸುತ್ತಿಲ್ಲ
ಮನೆ ಹಾಲ ರುಚಿ ಹೋಗಿ
ಬದಲಿಗೆ ಕಲಬೆರಕೆಯ
ಹಾಲಿನ ಪಾಕೀಟು
ಮನೆಬಾಗಿಲಿಗೆ ಬೆಳ್ಳಂಬೆಳಗ್ಗೆ

ನನ್ನಮ್ಮ ಎರಡು ರಟ್ಟೆ
ಬಳಸಿ ಮಸಾಲೆ ಅರೆಯುತ್ತಿದ್ದ
ರುಬ್ಬು ಕಲ್ಲು ಈಗಿಲ್ಲ
ಆ ಜಾಗದಲ್ಲಿ ರಾರಾಜಿಸುತ್ತಿದೆ
ಮಿಕ್ಸರು, ಗ್ರ್‍ಯಾಂಡರು

ನಮ್ಮ ಮನೆಯಲ್ಲೀಗ ವರ್ಷಾ ಒಂದಾವರ್ತಿ
ಮನೆ ಮುಂದಿನಂಗಳ ಹಸನು ಮಾಡಬೇಕಿಲ್ಲ
ಅದಕ್ಕೆ ಅಮ್ಮನ ಒರೆಗ ಕಲ್ಲುಗಳು
ಅಟ್ಟಕ್ಕೇರಿದೆ ಬಾಳಿಲ್ಲದೆ
ಹೊರತಿಗೆ, ಸಿಮೆಂಟು ನೆಲ
ಸಿರಿವಂತಿಗೆ ಸಾರುತ್ತಿದೆ

ಅಮ್ಮ ಅಂದು ಸೌದೆ ಅಟ್ಟಿ
ಅಡುಗೆ ಬೇಯಿಸುತ್ತಿದ್ದ ಮಣ್ಣಿನ
ಒಲೆಗಳು ಈಗಿಲ್ಲ
ಆ ಜಾಗದಲ್ಲಿ ಕಲ್ಲಿನ ಕಟ್ಟೆ
ಎದ್ದು ಗ್ಯಾಸ ಒಲೆ
ಸ್ಥಾಪನೆಯಾಗಿದೆ

ನಮ್ಮ ಮನೆಯಲ್ಲೀಗ
ಆಡಂಬರವಿದೆ, ಆದರೆ
ಹಿಂದಿನ ಆನಂದವಿಲ್ಲ
ಒಡಹುಟ್ಟಿದವರ ಸಂಬಂಧವಿದೆ
ಹಿಂದಿನ ಅನುಬಂಧವಿಲ್ಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...