Home / ಕಥೆ / ಕಿರು ಕಥೆ / ಹರಕೆಯ ಕುರಿ

ಹರಕೆಯ ಕುರಿ

ಚಿತ್ರ: ಪಿಕ್ಸಾಬೇ
ಚಿತ್ರ: ಪಿಕ್ಸಾಬೇ

ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು.

ಕುಲದೇವರು ನೆಲೆಸಿರುವ ಊರಿಗೆ ಹೊರಡುವ ಸಿದ್ಧತೆಯಾಯಿತು. ಮಿನಿ ಟ್ರಕ್ಕು ಬಂದು ಮನೆಯ ಮುಂದೆ ನಿಂತಿತು. ಯಜಮಾನನ ಮನೆಯ ಜನ, ಬಂಧು, ಬಳಗ, ಆಪ್ತವಲಯದವರು ಟ್ರಕ್ಕು ಏರಿದರು. ಅವರ ನಡುವೆ ಹರಕೆಯ ಕುರಿ, ಕುಳಿತವರು ಅದನ್ನು ಭಕ್ತಿಯಿಂದ ಗಮನಿಸುತ್ತಿದ್ದರು.

ಸಂಭ್ರಮದಿಂದ ಚಲಿಸುತ್ತಿತ್ತು ಗಾಡಿ. ಕೆಲವರು ಮಾತಿನ ಲಹರಿಯಲ್ಲಿ ಕಳೆದು ಹೋಗಿದ್ದರು. ಪ್ರಾಯದ ಹುಡುಗ-ಹುಡುಗಿಯರು, ಹಾಡು, ಹಾಸ್ಯ, ಕೇಕೆಯಲ್ಲಿ ತನ್ಮಯರಾಗಿದ್ದರು. ಆಗಾಗ ದೇವರ ಉಘೇ ಉಘೇ ಉದ್ಘೋಷವೂ ಮೊಳಗುತ್ತಿತ್ತು.

ತವಕ ತಲ್ಲಣದಲ್ಲಿ ಹರಕೆಯ ಕುರಿ ದಟ್ಟ ಮೌನ ಧರಿಸಿ ನಿಂತಿತ್ತು. ಜನರ ಉತ್ಸಾಹ ನನ್ನ ಬಲಿಯ ದ್ಯೋತಕವೆಂದು ಕುರಿಗೆ ಮನದಟ್ಟಾಗಿತ್ತು. ಆಗಾಗ ಅದು ಅಸಹಾಯಕವಾಗಿ ನಿಟ್ಟುಸಿರು ಚೆಲ್ಲುತ್ತಿತ್ತು. ತಮ್ಮ ಹಿತಕ್ಕಾಗಿ ದುರ್ಬಲ ಪ್ರಾಣಿಗಳನ್ನು ಬಲಿಕೊಟ್ಟು ದೇವರು, ಧರ್ಮಗಳನ್ನು ದುರುಪಯೋಗ ಪಡಿಸಿಕೊಳ್ಳುವ ಜನರ ಹುನ್ನಾರಗಳಿಗೆ ಕುರಿ ಮೂಕವಾಗಿ ರೋಧಿಸುತೊಡಗಿತ್ತು.

ಗಾಡಿ ರಸ್ತೆಯುದ್ದಕ್ಕೂ ವೇಗವಾಗಿ ಓಡತೊಡಗಿತ್ತು. ಅದರೊಂದಿಗೆ ಸ್ಪರ್ಧೆಗಿಳಿದಂತೆ ಜನರ ಹರ್ಷೋದ್ಗಾರ.

ಒಮ್ಮೆಲೆ ಧಡಲ್ ಎಂಬ ಸದ್ದು!

ಎದುರಿಗೆ ಬಂದ ಭೂತಾಕಾರದ ಟ್ರಕ್ಕೊಂದು ಮಿನಿಲಾರಿಗೆ ಭಯಂಕರವಾಗಿ ಡಿಕ್ಕಿ ಹೊಡೆದು ಪಕ್ಕದ ಕಮರಿಗೆ ನೂಕಿತ್ತು.

ಹಾಹಾಕಾರ, ಚೀತ್ಕಾರ, ನರಳಾಟ, ರಕ್ತದ ಕೋಡಿ.

ಲಾರಿ ಪುಡಿಪುಡಿಯಾಯಿತು, ಅದರೊಳಗಿದ್ದವರು ಒಬ್ಬರೂ ಉಳಿಯಲಿಲ್ಲ.

ದಿಬ್ಬದ ಮೇಲೆ ನಿಂತ ಹರಕೆಯ ಕುರಿ ಮಾತ್ರ ಬ್ಯಾ…. ಬ್ಯಾ…. ಎನ್ನತೊಡಗಿತ್ತು.

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...