ಹರಕೆಯ ಕುರಿ

ಹರಕೆಯ ಕುರಿ

ಚಿತ್ರ: ಪಿಕ್ಸಾಬೇ
ಚಿತ್ರ: ಪಿಕ್ಸಾಬೇ

ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು.

ಕುಲದೇವರು ನೆಲೆಸಿರುವ ಊರಿಗೆ ಹೊರಡುವ ಸಿದ್ಧತೆಯಾಯಿತು. ಮಿನಿ ಟ್ರಕ್ಕು ಬಂದು ಮನೆಯ ಮುಂದೆ ನಿಂತಿತು. ಯಜಮಾನನ ಮನೆಯ ಜನ, ಬಂಧು, ಬಳಗ, ಆಪ್ತವಲಯದವರು ಟ್ರಕ್ಕು ಏರಿದರು. ಅವರ ನಡುವೆ ಹರಕೆಯ ಕುರಿ, ಕುಳಿತವರು ಅದನ್ನು ಭಕ್ತಿಯಿಂದ ಗಮನಿಸುತ್ತಿದ್ದರು.

ಸಂಭ್ರಮದಿಂದ ಚಲಿಸುತ್ತಿತ್ತು ಗಾಡಿ. ಕೆಲವರು ಮಾತಿನ ಲಹರಿಯಲ್ಲಿ ಕಳೆದು ಹೋಗಿದ್ದರು. ಪ್ರಾಯದ ಹುಡುಗ-ಹುಡುಗಿಯರು, ಹಾಡು, ಹಾಸ್ಯ, ಕೇಕೆಯಲ್ಲಿ ತನ್ಮಯರಾಗಿದ್ದರು. ಆಗಾಗ ದೇವರ ಉಘೇ ಉಘೇ ಉದ್ಘೋಷವೂ ಮೊಳಗುತ್ತಿತ್ತು.

ತವಕ ತಲ್ಲಣದಲ್ಲಿ ಹರಕೆಯ ಕುರಿ ದಟ್ಟ ಮೌನ ಧರಿಸಿ ನಿಂತಿತ್ತು. ಜನರ ಉತ್ಸಾಹ ನನ್ನ ಬಲಿಯ ದ್ಯೋತಕವೆಂದು ಕುರಿಗೆ ಮನದಟ್ಟಾಗಿತ್ತು. ಆಗಾಗ ಅದು ಅಸಹಾಯಕವಾಗಿ ನಿಟ್ಟುಸಿರು ಚೆಲ್ಲುತ್ತಿತ್ತು. ತಮ್ಮ ಹಿತಕ್ಕಾಗಿ ದುರ್ಬಲ ಪ್ರಾಣಿಗಳನ್ನು ಬಲಿಕೊಟ್ಟು ದೇವರು, ಧರ್ಮಗಳನ್ನು ದುರುಪಯೋಗ ಪಡಿಸಿಕೊಳ್ಳುವ ಜನರ ಹುನ್ನಾರಗಳಿಗೆ ಕುರಿ ಮೂಕವಾಗಿ ರೋಧಿಸುತೊಡಗಿತ್ತು.

ಗಾಡಿ ರಸ್ತೆಯುದ್ದಕ್ಕೂ ವೇಗವಾಗಿ ಓಡತೊಡಗಿತ್ತು. ಅದರೊಂದಿಗೆ ಸ್ಪರ್ಧೆಗಿಳಿದಂತೆ ಜನರ ಹರ್ಷೋದ್ಗಾರ.

ಒಮ್ಮೆಲೆ ಧಡಲ್ ಎಂಬ ಸದ್ದು!

ಎದುರಿಗೆ ಬಂದ ಭೂತಾಕಾರದ ಟ್ರಕ್ಕೊಂದು ಮಿನಿಲಾರಿಗೆ ಭಯಂಕರವಾಗಿ ಡಿಕ್ಕಿ ಹೊಡೆದು ಪಕ್ಕದ ಕಮರಿಗೆ ನೂಕಿತ್ತು.

ಹಾಹಾಕಾರ, ಚೀತ್ಕಾರ, ನರಳಾಟ, ರಕ್ತದ ಕೋಡಿ.

ಲಾರಿ ಪುಡಿಪುಡಿಯಾಯಿತು, ಅದರೊಳಗಿದ್ದವರು ಒಬ್ಬರೂ ಉಳಿಯಲಿಲ್ಲ.

ದಿಬ್ಬದ ಮೇಲೆ ನಿಂತ ಹರಕೆಯ ಕುರಿ ಮಾತ್ರ ಬ್ಯಾ…. ಬ್ಯಾ…. ಎನ್ನತೊಡಗಿತ್ತು.

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ
Next post ನಗಬಾರದಮ್ಮ ಲಗುಬಿಗಿ ಸುಮ್ಮನೆ ಬೀಸಮ್ಮ

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…