ಹರಕೆಯ ಕುರಿ

ಹರಕೆಯ ಕುರಿ

ಚಿತ್ರ: ಪಿಕ್ಸಾಬೇ
ಚಿತ್ರ: ಪಿಕ್ಸಾಬೇ

ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು.

ಕುಲದೇವರು ನೆಲೆಸಿರುವ ಊರಿಗೆ ಹೊರಡುವ ಸಿದ್ಧತೆಯಾಯಿತು. ಮಿನಿ ಟ್ರಕ್ಕು ಬಂದು ಮನೆಯ ಮುಂದೆ ನಿಂತಿತು. ಯಜಮಾನನ ಮನೆಯ ಜನ, ಬಂಧು, ಬಳಗ, ಆಪ್ತವಲಯದವರು ಟ್ರಕ್ಕು ಏರಿದರು. ಅವರ ನಡುವೆ ಹರಕೆಯ ಕುರಿ, ಕುಳಿತವರು ಅದನ್ನು ಭಕ್ತಿಯಿಂದ ಗಮನಿಸುತ್ತಿದ್ದರು.

ಸಂಭ್ರಮದಿಂದ ಚಲಿಸುತ್ತಿತ್ತು ಗಾಡಿ. ಕೆಲವರು ಮಾತಿನ ಲಹರಿಯಲ್ಲಿ ಕಳೆದು ಹೋಗಿದ್ದರು. ಪ್ರಾಯದ ಹುಡುಗ-ಹುಡುಗಿಯರು, ಹಾಡು, ಹಾಸ್ಯ, ಕೇಕೆಯಲ್ಲಿ ತನ್ಮಯರಾಗಿದ್ದರು. ಆಗಾಗ ದೇವರ ಉಘೇ ಉಘೇ ಉದ್ಘೋಷವೂ ಮೊಳಗುತ್ತಿತ್ತು.

ತವಕ ತಲ್ಲಣದಲ್ಲಿ ಹರಕೆಯ ಕುರಿ ದಟ್ಟ ಮೌನ ಧರಿಸಿ ನಿಂತಿತ್ತು. ಜನರ ಉತ್ಸಾಹ ನನ್ನ ಬಲಿಯ ದ್ಯೋತಕವೆಂದು ಕುರಿಗೆ ಮನದಟ್ಟಾಗಿತ್ತು. ಆಗಾಗ ಅದು ಅಸಹಾಯಕವಾಗಿ ನಿಟ್ಟುಸಿರು ಚೆಲ್ಲುತ್ತಿತ್ತು. ತಮ್ಮ ಹಿತಕ್ಕಾಗಿ ದುರ್ಬಲ ಪ್ರಾಣಿಗಳನ್ನು ಬಲಿಕೊಟ್ಟು ದೇವರು, ಧರ್ಮಗಳನ್ನು ದುರುಪಯೋಗ ಪಡಿಸಿಕೊಳ್ಳುವ ಜನರ ಹುನ್ನಾರಗಳಿಗೆ ಕುರಿ ಮೂಕವಾಗಿ ರೋಧಿಸುತೊಡಗಿತ್ತು.

ಗಾಡಿ ರಸ್ತೆಯುದ್ದಕ್ಕೂ ವೇಗವಾಗಿ ಓಡತೊಡಗಿತ್ತು. ಅದರೊಂದಿಗೆ ಸ್ಪರ್ಧೆಗಿಳಿದಂತೆ ಜನರ ಹರ್ಷೋದ್ಗಾರ.

ಒಮ್ಮೆಲೆ ಧಡಲ್ ಎಂಬ ಸದ್ದು!

ಎದುರಿಗೆ ಬಂದ ಭೂತಾಕಾರದ ಟ್ರಕ್ಕೊಂದು ಮಿನಿಲಾರಿಗೆ ಭಯಂಕರವಾಗಿ ಡಿಕ್ಕಿ ಹೊಡೆದು ಪಕ್ಕದ ಕಮರಿಗೆ ನೂಕಿತ್ತು.

ಹಾಹಾಕಾರ, ಚೀತ್ಕಾರ, ನರಳಾಟ, ರಕ್ತದ ಕೋಡಿ.

ಲಾರಿ ಪುಡಿಪುಡಿಯಾಯಿತು, ಅದರೊಳಗಿದ್ದವರು ಒಬ್ಬರೂ ಉಳಿಯಲಿಲ್ಲ.

ದಿಬ್ಬದ ಮೇಲೆ ನಿಂತ ಹರಕೆಯ ಕುರಿ ಮಾತ್ರ ಬ್ಯಾ…. ಬ್ಯಾ…. ಎನ್ನತೊಡಗಿತ್ತು.

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ
Next post ನಗಬಾರದಮ್ಮ ಲಗುಬಿಗಿ ಸುಮ್ಮನೆ ಬೀಸಮ್ಮ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys