Home / ಕಥೆ / ಕಿರು ಕಥೆ / ಹರಕೆಯ ಕುರಿ

ಹರಕೆಯ ಕುರಿ

ಚಿತ್ರ: ಪಿಕ್ಸಾಬೇ
ಚಿತ್ರ: ಪಿಕ್ಸಾಬೇ

ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು.

ಕುಲದೇವರು ನೆಲೆಸಿರುವ ಊರಿಗೆ ಹೊರಡುವ ಸಿದ್ಧತೆಯಾಯಿತು. ಮಿನಿ ಟ್ರಕ್ಕು ಬಂದು ಮನೆಯ ಮುಂದೆ ನಿಂತಿತು. ಯಜಮಾನನ ಮನೆಯ ಜನ, ಬಂಧು, ಬಳಗ, ಆಪ್ತವಲಯದವರು ಟ್ರಕ್ಕು ಏರಿದರು. ಅವರ ನಡುವೆ ಹರಕೆಯ ಕುರಿ, ಕುಳಿತವರು ಅದನ್ನು ಭಕ್ತಿಯಿಂದ ಗಮನಿಸುತ್ತಿದ್ದರು.

ಸಂಭ್ರಮದಿಂದ ಚಲಿಸುತ್ತಿತ್ತು ಗಾಡಿ. ಕೆಲವರು ಮಾತಿನ ಲಹರಿಯಲ್ಲಿ ಕಳೆದು ಹೋಗಿದ್ದರು. ಪ್ರಾಯದ ಹುಡುಗ-ಹುಡುಗಿಯರು, ಹಾಡು, ಹಾಸ್ಯ, ಕೇಕೆಯಲ್ಲಿ ತನ್ಮಯರಾಗಿದ್ದರು. ಆಗಾಗ ದೇವರ ಉಘೇ ಉಘೇ ಉದ್ಘೋಷವೂ ಮೊಳಗುತ್ತಿತ್ತು.

ತವಕ ತಲ್ಲಣದಲ್ಲಿ ಹರಕೆಯ ಕುರಿ ದಟ್ಟ ಮೌನ ಧರಿಸಿ ನಿಂತಿತ್ತು. ಜನರ ಉತ್ಸಾಹ ನನ್ನ ಬಲಿಯ ದ್ಯೋತಕವೆಂದು ಕುರಿಗೆ ಮನದಟ್ಟಾಗಿತ್ತು. ಆಗಾಗ ಅದು ಅಸಹಾಯಕವಾಗಿ ನಿಟ್ಟುಸಿರು ಚೆಲ್ಲುತ್ತಿತ್ತು. ತಮ್ಮ ಹಿತಕ್ಕಾಗಿ ದುರ್ಬಲ ಪ್ರಾಣಿಗಳನ್ನು ಬಲಿಕೊಟ್ಟು ದೇವರು, ಧರ್ಮಗಳನ್ನು ದುರುಪಯೋಗ ಪಡಿಸಿಕೊಳ್ಳುವ ಜನರ ಹುನ್ನಾರಗಳಿಗೆ ಕುರಿ ಮೂಕವಾಗಿ ರೋಧಿಸುತೊಡಗಿತ್ತು.

ಗಾಡಿ ರಸ್ತೆಯುದ್ದಕ್ಕೂ ವೇಗವಾಗಿ ಓಡತೊಡಗಿತ್ತು. ಅದರೊಂದಿಗೆ ಸ್ಪರ್ಧೆಗಿಳಿದಂತೆ ಜನರ ಹರ್ಷೋದ್ಗಾರ.

ಒಮ್ಮೆಲೆ ಧಡಲ್ ಎಂಬ ಸದ್ದು!

ಎದುರಿಗೆ ಬಂದ ಭೂತಾಕಾರದ ಟ್ರಕ್ಕೊಂದು ಮಿನಿಲಾರಿಗೆ ಭಯಂಕರವಾಗಿ ಡಿಕ್ಕಿ ಹೊಡೆದು ಪಕ್ಕದ ಕಮರಿಗೆ ನೂಕಿತ್ತು.

ಹಾಹಾಕಾರ, ಚೀತ್ಕಾರ, ನರಳಾಟ, ರಕ್ತದ ಕೋಡಿ.

ಲಾರಿ ಪುಡಿಪುಡಿಯಾಯಿತು, ಅದರೊಳಗಿದ್ದವರು ಒಬ್ಬರೂ ಉಳಿಯಲಿಲ್ಲ.

ದಿಬ್ಬದ ಮೇಲೆ ನಿಂತ ಹರಕೆಯ ಕುರಿ ಮಾತ್ರ ಬ್ಯಾ…. ಬ್ಯಾ…. ಎನ್ನತೊಡಗಿತ್ತು.

 

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...