Home / ಕಥೆ / ಕಿರು ಕಥೆ / ಹರಕೆಯ ಕುರಿ

ಹರಕೆಯ ಕುರಿ

ಚಿತ್ರ: ಪಿಕ್ಸಾಬೇ
ಚಿತ್ರ: ಪಿಕ್ಸಾಬೇ

ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು.

ಕುಲದೇವರು ನೆಲೆಸಿರುವ ಊರಿಗೆ ಹೊರಡುವ ಸಿದ್ಧತೆಯಾಯಿತು. ಮಿನಿ ಟ್ರಕ್ಕು ಬಂದು ಮನೆಯ ಮುಂದೆ ನಿಂತಿತು. ಯಜಮಾನನ ಮನೆಯ ಜನ, ಬಂಧು, ಬಳಗ, ಆಪ್ತವಲಯದವರು ಟ್ರಕ್ಕು ಏರಿದರು. ಅವರ ನಡುವೆ ಹರಕೆಯ ಕುರಿ, ಕುಳಿತವರು ಅದನ್ನು ಭಕ್ತಿಯಿಂದ ಗಮನಿಸುತ್ತಿದ್ದರು.

ಸಂಭ್ರಮದಿಂದ ಚಲಿಸುತ್ತಿತ್ತು ಗಾಡಿ. ಕೆಲವರು ಮಾತಿನ ಲಹರಿಯಲ್ಲಿ ಕಳೆದು ಹೋಗಿದ್ದರು. ಪ್ರಾಯದ ಹುಡುಗ-ಹುಡುಗಿಯರು, ಹಾಡು, ಹಾಸ್ಯ, ಕೇಕೆಯಲ್ಲಿ ತನ್ಮಯರಾಗಿದ್ದರು. ಆಗಾಗ ದೇವರ ಉಘೇ ಉಘೇ ಉದ್ಘೋಷವೂ ಮೊಳಗುತ್ತಿತ್ತು.

ತವಕ ತಲ್ಲಣದಲ್ಲಿ ಹರಕೆಯ ಕುರಿ ದಟ್ಟ ಮೌನ ಧರಿಸಿ ನಿಂತಿತ್ತು. ಜನರ ಉತ್ಸಾಹ ನನ್ನ ಬಲಿಯ ದ್ಯೋತಕವೆಂದು ಕುರಿಗೆ ಮನದಟ್ಟಾಗಿತ್ತು. ಆಗಾಗ ಅದು ಅಸಹಾಯಕವಾಗಿ ನಿಟ್ಟುಸಿರು ಚೆಲ್ಲುತ್ತಿತ್ತು. ತಮ್ಮ ಹಿತಕ್ಕಾಗಿ ದುರ್ಬಲ ಪ್ರಾಣಿಗಳನ್ನು ಬಲಿಕೊಟ್ಟು ದೇವರು, ಧರ್ಮಗಳನ್ನು ದುರುಪಯೋಗ ಪಡಿಸಿಕೊಳ್ಳುವ ಜನರ ಹುನ್ನಾರಗಳಿಗೆ ಕುರಿ ಮೂಕವಾಗಿ ರೋಧಿಸುತೊಡಗಿತ್ತು.

ಗಾಡಿ ರಸ್ತೆಯುದ್ದಕ್ಕೂ ವೇಗವಾಗಿ ಓಡತೊಡಗಿತ್ತು. ಅದರೊಂದಿಗೆ ಸ್ಪರ್ಧೆಗಿಳಿದಂತೆ ಜನರ ಹರ್ಷೋದ್ಗಾರ.

ಒಮ್ಮೆಲೆ ಧಡಲ್ ಎಂಬ ಸದ್ದು!

ಎದುರಿಗೆ ಬಂದ ಭೂತಾಕಾರದ ಟ್ರಕ್ಕೊಂದು ಮಿನಿಲಾರಿಗೆ ಭಯಂಕರವಾಗಿ ಡಿಕ್ಕಿ ಹೊಡೆದು ಪಕ್ಕದ ಕಮರಿಗೆ ನೂಕಿತ್ತು.

ಹಾಹಾಕಾರ, ಚೀತ್ಕಾರ, ನರಳಾಟ, ರಕ್ತದ ಕೋಡಿ.

ಲಾರಿ ಪುಡಿಪುಡಿಯಾಯಿತು, ಅದರೊಳಗಿದ್ದವರು ಒಬ್ಬರೂ ಉಳಿಯಲಿಲ್ಲ.

ದಿಬ್ಬದ ಮೇಲೆ ನಿಂತ ಹರಕೆಯ ಕುರಿ ಮಾತ್ರ ಬ್ಯಾ…. ಬ್ಯಾ…. ಎನ್ನತೊಡಗಿತ್ತು.

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...