ಭಾವನಾಲಹರಿ

ಭಾವನಾ ಲಹರಿಯಲ್ಲಿ
ಮಿಂದ ಆ ದಿನ
ನೆನಪಾಯ್ತು ಇಂದು ಈ ದಿನ||

ಅಂದಿನ ಆ ದಿನಕೂ
ಇಂದಿನ ಈ ದಿನಕೂ
ನಿನ್ನನಗಲಿದಾಕ್ಷಣ ಮರುಮಾತಾಗಿ
ಎನ್ನ ಮನ ಕದಡಿತು||

ಭಾವನೆಯ ಕಣ್ಗಳಲ್ಲಿ
ಕಾಣುವ ನಿನ್ನ ನೋಟ
ನೆನಪಿನಂಗಳದೆ ರೂಪವಾಯ್ತು
ರೂಪವಾಗಿ ಎನ್ನೆದೆಯೊಳಗೆ ಸ್ಥಿರವಾಯ್ತು||

ಸ್ಥಿರತೆ ಎಂಬ ಹೂಬಳ್ಳಿ
ಅರಳಿ ಆಸರೆಯ ನೀಗಿಸಿ
ಬಣ್ಣ ಬಣ್ಣಗಳಾನಂದದ
ಹೊನ್ನಕೊಡ ತುಂಬಿ ನೀರೆರೆಯಿತು||

ಹಚ್ಚಹಸಿರ ಬಣ್ಣ, ಕೆಂಪು ಹೂ ಬಣ್ಣ
ಹಳದಿ ತಾ ಎಲೆ ಎಲೆಗಳ ಮೇಲೆ
ಪುಟ ಪುಟಗಳ ಸಾಲು
ನಿನ್ನ ನೆನಪೆ ಲೇಖನಿಯಾಗಿಸಿತು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡ ತನ್ನಷ್ಟಕ್ಕೆ ಕಮ್ಸು ಟು ಅಸ್ಸು
Next post ಬೂಟ್ ಪಾಲಿಶ್ ಹುಡುಗನ ಜೋಳಿಗೆ

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys