Home / ಲೇಖನ / ವಿಜ್ಞಾನ / ವಿಸ್ಮಯ ಜೀವ ಸೃಷ್ಟಿಯ ವಂಶಾಣು ವರ್ಗಾವಣೆ

ವಿಸ್ಮಯ ಜೀವ ಸೃಷ್ಟಿಯ ವಂಶಾಣು ವರ್ಗಾವಣೆ

ಚಿತ್ರ: ಕಾಲಿನ್ ಬೆಹ್ರೆನ್ಸ್

ಈಗಾಗಲೇ ತಂತ್ರಜ್ಞಾನದಿಂದ ಏನೆಲ್ಲ ವಿಸ್ಮಯಗಳ ಸೃಷ್ಟಿಯಾಗುತ್ತಲಿದೆ. ಮುಂದಿನ ಶತಮಾನದಲ್ಲಿ ನಂಬಲಸಾಧ್ಯವಾದ ಕೌತುಕಗಳನ್ನು ಪ್ರಕಟಿಸುತ್ತದೆ. ಹೊಸ ಪೀಳಿಗೆಯ ಹಸು, ಕುರಿ, ಕೋಳಿ ಇತ್ಯಾದಿಗಳನ್ನು ತಯಾರಿಸಬಹುದು. ಇವು ನೈಸರ್ಗಿಕವಾಗಿ ಜನಿಸಿದವಾಗಿರುವುದಿಲ್ಲ. ಮನುಷ್ಯನು ಇವುಗಳ ವಂಶಾಣುಗಳಲ್ಲಿ ವ್ಯತ್ಯಾಸಗಳನ್ನು ಮಾಡಿ ಕೃತಕವಾಗಿ ನಿರ್ಮಿಸಿದ ಪ್ರಾಣಿಗಳಾಗಿರಬಹುದು.

ಒಂದು ಪ್ರಾಣಿಯ ವಂಶಾಣುವಿನಲ್ಲಿ (Gene) ಪರಿವರ್ತನೆ ಮಾಡಿ ನಮಗೆ ಎಂತಹ ರೀತಿಯ ಹೊಸ ಪ್ರಾಣಿಗಳನ್ನು ತಯಾರಿಸಬಹುದು. ಉದಾ: ಬಕೆಟ್ ಗಟ್ಟಲೇ ಹಾಲು ಕರಿಯುವ ಹಸುಬೇಕೆಂದರೆ ವಂಶಾಣು ವರ್ಗಾವಣೆಯ (Transgenic) ತಂತ್ರಜ್ಞಾನದಿಂದ ಅಂತಹ ಹಸುಗಳನ್ನು ಸೃಷ್ಟಿಸಬಹುದು. ತಂತ್ರಜ್ಞಾನದಿಂದ ಬೆಳೆಸಿದ ಹತ್ತಿಯು ಪಾಲಿಯೆಸ್ಟರ್ ಸಂಯುಕ್ತವನ್ನು ಉತ್ಪಾದಿಸಬೇಕೆಂದರೆ ಹಾಗೂ ಮಾಡಬಹುದು. ಆಡಿನ ಹಾಲಿನಲ್ಲಿ ‘ಹಿಮೋಫೀಲಿಯಾ ಎಂಪಿಸೀಮಾ’ ರೋಗಗಳನ್ನು ನಿಯಂತ್ರಿಸುವ ಪದಾರ್ಥಗಳಿರುತ್ತವೆ.

ಅಮೇರಿಕಾದಲ್ಲಿ ರೈತರು ಮೂವತ್ತು ದಶಲಕ್ಷ ಎಕರೆ ಭೂಮಿಯಲ್ಲಿ ವಂಶಾಣು ವರ್ಗಾವಣೆ ಆಧಾರಿತ ಸಮಸ್ಯೆಗಳನ್ನು ಈಗಾಗಲೇ ಬೆಳೆಸುತ್ತಿದ್ದಾರೆ. ಬರಲಿರುವ ಕಾರ್ಖಾನೆಗಳಲ್ಲಿ ಜೈವಿಕ ತಂತ್ರಜ್ಞಾನಗಳನ್ನು ಬಳಸಿ ಅನೇಕ ಪ್ಲಾಸ್ಟಿಕ್‌ಗಳು, ಎಂಜೈಮ್‌ಗಳು, ಪರ್ಯಾಯ ಇಂಧನಗಳು ತಯಾರಾಗುತ್ತವೆ. ವಿಶಿಷ್ಟವಾದ ಮರಗಳಿಂದ ಉತ್ತಮ ಮಟ್ಟದ ಕಾಗದ ಪಲ್ಫ್ ತಯಾರಾಗುವುದು ಕ್ಯಾಲಿಫೋರ್ನಿಯಾದ ಸಂಸ್ಥೆಯೊಂದು ಸಾಬೂನಿಗೆ ಬೇಕಾಗುವ ವಿಶಿಷ್ಟ ಬೀಜಗಳನ್ನು ತಯಾರಿಸುತ್ತದೆ. ವಂಶಾಣುವರ್ಗಾವಣೆಯ ತಂತ್ರಜ್ಞಾನವು ಔಷಧ ಶಾಸ್ತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತಲಿದೆ. ವರ್ಜಿನೀಯಾದ ಪಾಲಿಟೆಕಕ್ನಿಕ್ ಇನ್ಸ್‍ಟ್ಯೂಟ್ ಅಂಡ್ ಸ್ಟೇಟ್ ಯುನಿವರ್ಸಿಟಿಯಲ್ಲಿ ತಯಾರಿಸಿದ ಹಂದಿಗಳ ಹಾಲಿನಲ್ಲಿ ಅನೇಕ ರೋಗ ನಿವಾರಕ ಗುಣಗಳಿವೆಯಂತೆ. ಮನುಷ್ಯರ ರಕ್ತ ಹೆಪ್ಪುಗಟ್ಟಿಸುವಿಕೆಗೆ ಬೇಕಾಗುವ ಪ್ರೋಟೀನು – ಸಿ ಉಸಿರಾಟದ ತೊಂದರೆಗಳನ್ನು ತೊಡೆದು ಹಾಕುವ ‘ಆಲ್ಫಾ-೧’ ಯಟಿಟ್ರಿ ಪ್ಸಿನ್‌ಗಳು ಅದರಲ್ಲಿವೆ. ಒಂದು ಹಂದಿ ಪ್ರತಿವರ್ಷಕ್ಕೆ ಕರೆಯುವ ೩೦೦ ಲೀಟರ್ ಹಾಲಿನಲ್ಲಿ
ಶೇಕಡಾ ಹತ್ತನೆ ಒಂದು ಭಾಗದಷ್ಟು ಪ್ರೋಟಿನ್ -ಸಿ ಇರುತ್ತದೆಂದು ಕಂಡು ಹಿಡಿಯಲಾಗಿದೆ. ಮ್ಯಾಸಾಚ್ಯೂಟ್ಸ್‌ ಜೆಂಜೈಮ್ ಟ್ರಾನ್ಸ್‌ಜೆನಿಕ್ಸ್ ಕಾರ್ಪೊರೇಶನ್‌ನಲ್ಲಿ ಅಭಿವೃದ್ಧಿ ಪಡಿಸಿದ ಆಡುಗಳ ಹಾಲಿನಲ್ಲಿ ಕೆಲವೊಂದು ಕ್ಯಾನ್ಸರ್‌ಗಳು, ಹೃದಯರೋಗ, ಚರ್ಮರೋಗ ಮತ್ತು ಇತರ ಅನೇಕ ರೋಗಗಳನ್ನು ಶಮನಗೊಳಿಸುವ ಗುಣಗಳಿವೆ, ಎಂದು ವರದಿಯಾಗಿದೆ.

ವಂಶಾಣುವರ್ಗಾವಣೆಯ ತಂತ್ರಜ್ಞಾನವು ಎಷ್ಟರ ಮಟ್ಟಿಗೆ ವರವಾಗುವುದೋ ಅಷ್ಟೇ ಶಾಪವಾಗಿ ಪರಿಣಮಿಸಬಹುದೆಂಬ ಆತಂಕ ವಿಜ್ಞಾನಿಗಳಿಗಿದೆ. ನಿಸರ್ಗದ ಜೀವ ಜಗತ್ತಿನ ಸಮತೋಲನವನ್ನು ಹಾಳುಮಾಡಬಹುದು ಎಂಬ ಭಯ ಅವರದು. ಇಷ್ಟಾದ್ದಾಗ್ಯೂ ಸಸ್ಯಗಳಿಂದ ಹೆಚ್ಚು ಅಗ್ಗವಾದ ಪದಾರ್ಥಗಳನ್ನು ತಯಾರಿಸಬಹುದೆಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...