ದೇವರಿಗೆ ಬಿಟ್ಟಿದ್ದು

ಬಿರು ಬೇಸಿಗೆ ಒಂದು ಮಧ್ಯಾಹ್ನ ಪಾಟೀಲ್ ಸರ್‍ ಭೇಟಿಯಾದರು. ಹೊರ ಜಿಲ್ಲೆಯ ಹಳ್ಳಿಯ ಶಾಲೆಯೊಂದರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕವಾದ ನಂತರ ಅವರು ಕಂಡದ್ದು ಅದೇ ಮೊದಲು. ಉಭಯಕುಶಲೋಪರಿ ತರುವಾಯ ಹೊಟೇಲಿಗೆ ಹೋಗಿ ಕಾಫಿಗೆ ಆರ್ಡರ್‍ ಕೊಟ್ಟು ಪಾಟೀಲರನ್ನು ಕೇಳಿದೆ:

“ನಿಮ್ಮ ಶಿಕ್ಷಕ ವೃತಿ ಹೇಗೆ ನಡೆದಿದೆ?”
“ಬಹಳ ಆರಾಮಾಗಿದೆ” ಎಂದರು ಪಾಟೀಲ ಸರ್‍.
“ನಿಮ್ಮ ಶಾಲೆಯಲ್ಲಿ ಎಷ್ಟು ತರಗತಿಗಳಿವೆ?”
“ಒಂದರಿಂದ ಐದು”
“ಸ್ಟಾಫ್?”
“ಫುಲ್ ಇದೆ”.
“ಕಟ್ಟಡ?”
“ಬಾಗಿಲು, ಕಿಟಕಿ, ಸೂರಿನ ಹಂಚು ಪೂರ್ತಿ ಇಲ್ಲದಿದ್ದರೂ ಸ್ವಂತ ಕಟ್ಟಡ ಇದೆ.”
“ಮಕ್ಕಳ ಸಂಖ್ಯೆ?”
“ಸಾಕಷ್ಟಿದೆ.”
“ದಾಖಲಾತಿ…. ಹಾಜರಾತಿ?”
“ಹಾಜರಾತಿಯದೇ ಸಮಸ್ಯೆ.”
“ಉಚಿತ ಪುಸ್ತಕ, ಬಟ್ಟೆ, ಬಿಸಿಯೂಟ ವ್ಯವಸ್ಥೆ ಇಲ್ಲವೆ?”
“ಎಲ್ಲ ಅನುಕೂಲವೂ ಇದೆ.”
“ಹಾಗಾದರೆ ಮಕ್ಕಳ ಹಾಜರಾತಿ ಕಮ್ಮಿ ಏಕೆ?”
“ಊಟದ ವೇಳೆಯಲ್ಲಿ ಹಾಜರಾತಿ ಹೆಚ್ಚಿಗಿರುವುದು.”
“ಮಕ್ಕಳ ಕಲಿಕೆಯ ಮಟ್ಟ.”
“ಆರಕ್ಕೇರದು ಮೂರಕ್ಕಿಳಿಯದು.”
“ಈ ಬಗ್ಗೆ ಸಹೇಬರು ಗಮನ ಹರಿಸುವುದಿಲ್ಲವೆ?”
“ಮಕ್ಕಳು ಶಾಲೆಗೆ ಬರಲಿ ಬಿಡಲಿ ವಾರ್ಷಿಕ ಪರೀಕ್ಷೆಯಲ್ಲಿ ಅವರೆಲ್ಲ ಪಾಸು.”
“ಓದು – ಬರಹ ಇಲ್ಲದೆ ಪಾಸಾಗುತ್ತಾರೆಯೇ ಅವರು?”
“ಮಕ್ಕಳಿಗೆ ಪರೀಕ್ಷೆಯ ಭಯ ಇರಬಾರದು. ಅವರನ್ನು ನಪಾಸೂ ಮಾಡಬಾರದು.”
“ಅವರ ಪ್ರಗತಿಯ ಬಗ್ಗೆ ಕಾಳಜಿ ವಹಿಸುವುದಿಲ್ಲವೆ ನೀವು?”
“ಹೆಡ್‌ಮಾಸ್ಟರ್‍ ಆ ಕಾಗದ ಈ ಕಾಗದ ಎಂದು ಆಫೀಸಿಗೆ ಅಲೆದಾಡುವರು. ನಮ್ಮಲ್ಲಿ ಕೆಲವರು ತರಬೇತಿಗೆ ಹೋಗುವರು. ಕೆಲವರಿಗೆ ಗಣತಿ ಕಾರ್ಯ ಅದು-ಇದು ಎಂದಿರುವುದು ಮಕ್ಕಳಿಗೆ ಕಲಿಸಲು ಪುರುಸೊತ್ತೇ ಸಿಗುವುದಿಲ್ಲ”
“ಸಾಹೇಬರು ನಿಮ್ಮ ಶಾಲೆಯ ತಪಾಸಣೆಗೆ ಬರುವುದಿಲ್ಲವೆ?”
“ಹಿರಿಯ ಸಾಹೇಬರು ವರ್ಷಕ್ಕೊಮ್ಮೆ ಬರುತ್ತಾರೆ, ಕಿರಿಯ ಸಾಹೇಬರು ಬೇಕೆನಿಸಿದಾಗ ದಿಢೀರನೆ ಪ್ರತ್ಯಕ್ಷರಾಗುತ್ತಾರೆ.”
“ಅವರಿಗೆ ಸಮಸ್ಯೆ ಅರ್ಥವಾಗುವುದಿಲ್ಲವೆ?”
“ತಮ್ಮ ವೈಯಕ್ತಿಕ ಬೇಡಿಕೆಗಳನ್ನು ಪೂರೈಸಿಕೊಂಡು ಹೋಗುವ ಅವರು ಕಲಿಸುವುದರ ಬಗ್ಗೆ ಚಕಾರವೆತ್ತುವುದಿಲ್ಲ. ವಿಜಿಟ್ ಪುಸ್ತಕದಲ್ಲಿ ಎಲ್ಲವೂ ಉತ್ತಮವಾಗಿರುತ್ತದೆ. ನಮ್ಮ ಶಾಲೆ ಬಹಳ ನೆಮ್ಮದಿಯಾಗಿದೆ.”
“ಊರಿನವರು ಲಕ್ಷ್ಯ ಕೊಡುವುದಿಲ್ಲವೆ?”
“ನಮ್ಮದು ಸರಕಾರಿ ಶಾಲೆ, ಅದರ ಮೇಲೆ ಅವರ ಹಕ್ಕು ಇಲ್ಲ.”
“ಇದೆಲ್ಲ ವಿಚಿತ್ರವಲ್ಲವೇ?”
“ಅದೆಲ್ಲ ಕವರಿನ ಮಹಿಮೆ!”
“ಕವರು … ಏನದು?”
“ಸಾಹೇಬರಿಗೆ ನಾವು ಕವರು ಮುಟ್ಟಿಸುತ್ತೇವೆ.”
“ಏಕೆ?”
“ಕವರಿನಲ್ಲಿ ನಮ್ಮ ದುಡ್ಡಿರುವುದು.”
“ಸಾಹೇಬರಿಗೆ ಹಣ ಏಕೆ? ಅವರಿಗೆ ಪಗಾರ ಇರುವುದಿಲ್ಲವೆ?”
“ಪಗಾರ ಅವರ ಸಂಸಾರಕ್ಕೆ ನಮ್ಮ ದುಡ್ಡು ಅವರ ಇತರೆ ಖರ್ಚಿಗೆ.”
‘ಇದೆಂಥ ವ್ಯವಸ್ಥೆ?”
“ನಮ್ಮ ದೋಷಗಳನ್ನು ಸಾಹೇಬರು ಮುಚ್ಚಿಕೊಳ್ಳುತ್ತಾರೆ. ಸಾಹೇಬರ ದೋಷಗಳನ್ನು ದೊಡ್ಡ ಸಾಹೇಬರು. ಅವರ ಮೇಲಿನವರ ದೋಷಗಳನ್ನು ಅದಕ್ಕೂ ಮೇಲಿನವರು ಬೇರಿನಿಂದ ಟೊಂಗೆಯ ತುದಿತನಕ ಇದೇ ವ್ಯವಸ್ಥೆ ಇರುವುದು.”
“ಶಾಲೆ ಮತ್ತು ಮಕ್ಕಳ ಗತಿ?”
“ದೇವರಿಗೇ ಬಿಟ್ಟದ್ದು!”

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಪರ್ಯಾಸ
Next post ಮಾನಿನಿ ಮಾತಾಡಬ್ಯಾಡಮ್ಮಾ

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

cheap jordans|wholesale air max|wholesale jordans|wholesale jewelry|wholesale jerseys