ಅಪ್ಪಯ್ಯನವರ ಪಾದ ಕಂಡೆ

ಅಪ್ಪಯ್ಯನವರ ಪಾದ ಕಂಡೆ ಸ್ವಾಮಿ
ಗುಡಿಪುರ ಗ್ರಾಮದೊಳೇರಿಸಿ ಜಂಡೇ ||ಪ||

ಉಕ್ಕುತಿಹ ಆನಂದ ಭರದಿ
ಸಕ್ಕರೆಯನೋದಕಿಯ ಮಾಡಿ
ಓಂಕಾರ ಪ್ರಣಮವ ನೋಡಿ
ಬಹುಕಾಲ ಭಕ್ತರ ಕೂಡಿ
ಬಸವಾದಿ ಪ್ರಮಥರು ಹಾಡಿ ||೧||

ಅಂಬರಪುರವಿಂಬುಮಾಡಿ
ಸಾಂಬನೂರವಿಲೆ ಬೆಳಿಸ್ಯಾರೊ ಸಾಮಗ್ರಿಗೂಡಿ
ಶಂಭು ಶರಣರು ಸವಿದಾಡಿ
ಹತ್ತುವರ್ಷ ಆದ ಮೇಲೆ
ಸತ್ಯ ಮೆರೆವದು ಮಹಾತ್ಮರಲ್ಲೆ
ಗೊತ್ತುಹಿಡಿ ಗೋವಿಂದರಾಜನ
ಪ್ರಣಮ ಪಂಚಾಕ್ಷರ ಧ್ಯಾನಿಸಿ ನುಡಿ
ಪರಮಾರಾಧ್ಯ ಪಂಚಾಚಾರ್ಯರು ಕೂಡಿ ಆಡವನು ಆಡಿ
ಪರಮೇಶ್ವರ ಪಾರ್ವತಿ ಹಾಡಿ ||೨||

ಪರಲೋಕದವರೆಲ್ಲ ಕೂಡಿ
ಪಂಚಾಗ್ನಿಮಠದೊಳು ಅಡಿಗೆಯ ಮಾಡಿ
ಅನ್ನ ಪ್ರಸಾದವ ನೀಡಿ
ಚೆನ್ನಬಸವೇಶ್ವರರು ಬರುತಿರೆ ಪ್ರಮಥ ಗಣಂಗಳು ಕೂಡಿ
ಕಲ್ಯಾಣಪುರವನು ಮಾಡಿ
ಹರ ಶರಣರ ಲೀಲಾಮೃತ ಪಾಡಿ
ಕಲಿ ಕರ್ಮ ವಿಕಾರಿಗೆ ಜಾಡಿ
ಶಿಶುನಾಳ ಗ್ರಾಮಕ ಕೂಡಿ
ಉಳಿದವರು ಗುರುಪಾದ ಕೂಡಿ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆದಿಬಸವ ಅನಾದಿಯಿಂದಲು
Next post ಮೈಲಾರ ಮಹದೇವ ಕೈಲಾಸಪತಿಯೆ

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

cheap jordans|wholesale air max|wholesale jordans|wholesale jewelry|wholesale jerseys