ಅಪ್ಪಯ್ಯನವರ ಪಾದ ಕಂಡೆ

ಅಪ್ಪಯ್ಯನವರ ಪಾದ ಕಂಡೆ ಸ್ವಾಮಿ
ಗುಡಿಪುರ ಗ್ರಾಮದೊಳೇರಿಸಿ ಜಂಡೇ ||ಪ||

ಉಕ್ಕುತಿಹ ಆನಂದ ಭರದಿ
ಸಕ್ಕರೆಯನೋದಕಿಯ ಮಾಡಿ
ಓಂಕಾರ ಪ್ರಣಮವ ನೋಡಿ
ಬಹುಕಾಲ ಭಕ್ತರ ಕೂಡಿ
ಬಸವಾದಿ ಪ್ರಮಥರು ಹಾಡಿ ||೧||

ಅಂಬರಪುರವಿಂಬುಮಾಡಿ
ಸಾಂಬನೂರವಿಲೆ ಬೆಳಿಸ್ಯಾರೊ ಸಾಮಗ್ರಿಗೂಡಿ
ಶಂಭು ಶರಣರು ಸವಿದಾಡಿ
ಹತ್ತುವರ್ಷ ಆದ ಮೇಲೆ
ಸತ್ಯ ಮೆರೆವದು ಮಹಾತ್ಮರಲ್ಲೆ
ಗೊತ್ತುಹಿಡಿ ಗೋವಿಂದರಾಜನ
ಪ್ರಣಮ ಪಂಚಾಕ್ಷರ ಧ್ಯಾನಿಸಿ ನುಡಿ
ಪರಮಾರಾಧ್ಯ ಪಂಚಾಚಾರ್ಯರು ಕೂಡಿ ಆಡವನು ಆಡಿ
ಪರಮೇಶ್ವರ ಪಾರ್ವತಿ ಹಾಡಿ ||೨||

ಪರಲೋಕದವರೆಲ್ಲ ಕೂಡಿ
ಪಂಚಾಗ್ನಿಮಠದೊಳು ಅಡಿಗೆಯ ಮಾಡಿ
ಅನ್ನ ಪ್ರಸಾದವ ನೀಡಿ
ಚೆನ್ನಬಸವೇಶ್ವರರು ಬರುತಿರೆ ಪ್ರಮಥ ಗಣಂಗಳು ಕೂಡಿ
ಕಲ್ಯಾಣಪುರವನು ಮಾಡಿ
ಹರ ಶರಣರ ಲೀಲಾಮೃತ ಪಾಡಿ
ಕಲಿ ಕರ್ಮ ವಿಕಾರಿಗೆ ಜಾಡಿ
ಶಿಶುನಾಳ ಗ್ರಾಮಕ ಕೂಡಿ
ಉಳಿದವರು ಗುರುಪಾದ ಕೂಡಿ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆದಿಬಸವ ಅನಾದಿಯಿಂದಲು
Next post ಮೈಲಾರ ಮಹದೇವ ಕೈಲಾಸಪತಿಯೆ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಮೇಷ್ಟ್ರು ಮುನಿಸಾಮಿ

    ಪ್ರಕರಣ ೮ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…